ರೋಹಿತ್ ಪಡೆಗೆ ಸರಣಿ ಕ್ಲೀನ್ ಸ್ವೀಪ್! ODI ನಂಬರ್ ಒನ್ ಸ್ಥಾನಕ್ಕೇರಿದ ಟೀಂ ಇಂಡಿಯಾ

ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.

ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.

ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.

ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.

90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

3 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

16 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

18 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

18 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

23 hours ago