ರೋಹಿತ್ – ರಿಂಕು ಅಬ್ಬರ , ಬಿಷ್ಣೋಯಿ ಬೌಲಿಂಗ್ ಗೆ ಮಂಕಾದ ಅಫ್ಘಾನ್, ಎರಡನೇ ಸೂಪರ್ ಓವರ್ ನಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಗರಿ..!

ಪ್ರತೀ ಹಂತದಲ್ಲೂ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ – ಆಫ್ಘಾನಿಸ್ತಾನದ ಮೂರನೇ ಪಂದ್ಯ ಎರಡು ಸೂಪರ್ ಓವರ್ ಗಳಿಗೆ ಸಾಕ್ಷಿಯಾಗಿದ್ದಲ್ಲದೆ ಭಾರತಕ್ಕೆ 3-0 ಅಂತರದಿಂದ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಗರಿ ಮುಡಿಗೇರಿಸಿಕೊಂಡಿತು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ, ಬ್ಯಾಟಿಂಗ್ ಆರಂಭಿಸಿತು. ಆದರೆ, ನಾಯಕ ರೋಹಿತ್ ಶರ್ಮಾ ಅವರ ನಿರೀಕ್ಷೆಗೆ ತಕ್ಕಂತೆ ಆಟ ನಡೆಯಲಿಲ್ಲ, ಕೇವಲ 22 ರನ್ ಗಳಿಸುವ ವೇಳೆಗೆ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (4), ವಿರಾಟ್ ಕೊಹ್ಲಿ (೦), ಆಲ್ ರೌಂಡರ್ ಶಿವಂ ದುಬೆ (1) ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (೦) ವಿಕೆಟ್ ಒಪ್ಪಿಸಿದರು.

ಆದರೂ ನಾಯಕ ರೋಹಿತ್ ಶರ್ಮಾ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (121) ರನ್ ಹಾಗೂ ರಿಂಕು ಸಿಂಗ್ 2 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 69 ರನ್ ಗಳಿಸಿ ದಾಖಲೆಯ 190 ರನ್ ಜೊತೆಯಾಟ ನಡೆಸಿ 212 ರನ್ ಗಳ ಬೃಹತ್ ಮೊತ್ತ ಕಲೆಹಾಕಿದರು.

ಆಫ್ಘಾನಿಸ್ತಾನದ ಪರವಾಗಿ ಅಹ್ಮದ್ ಮೂರು ವಿಕೆಟ್ ಕಬಳಿಸಿದರೆ ಅಜ್ಮತ್ ಉಲ್ಲಾ ಒಂದು ವಿಕೆಟ್ ಪಡೆದರು, ಉಳಿದ ಯಾವುದೇ ಬೌಲರ್ ಗಳು ವಿಕೆಟ್ ಪಡೆಯಲು ಪರದಾಡಿದರು ಹಾಗೂ ದುಬಾರಿಯಾದರು.

ಗುರಿ ಬೆನ್ನತ್ತಿದ್ದ ಆಫ್ಘನ್ ಪಡೆ ಉತ್ತಮ ಆರಂಭವನ್ನು ಪಡೆಯಿತು, ಆರಂಭಿಕ ಆಟಗಾರರಾದ ಗುಬಾ೯ಜ್ (50), ನಾಯಕ ಇಬ್ರಾಹಿಂ ಜದ್ರಾನ್ (50) ಮೊದಲ ವಿಕೆಟ್ ಗೆ 93 ರನ್ ಗಳಿಸಿದರು. ನಂತರ ಬಂದ ಗುಲ್ಬದ್ದಿನ್ (55) ಗಳಿಸಿ ಬಲ ತುಂಬಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಮೊಹಮ್ಮದ್ ನಬಿ ಬಿರುಸಿನ 34 ರನ್ ಗಳಿಸುವ ಮೂಲಕ ತಂಡ ಮೊತ್ತವನ್ನು ಗೆಲುವಿನ ಕಡೆ ಕೊಂಡೊಯ್ದರು ಸಹ ಗೆಲುವು ಸಿಗಲಿಲ್ಲ, ಕೇವಲ ಡ್ರಾಗೆ ತೃಪ್ತಿ ಪಡಬೇಕಾಯಿತು.

ನಂತರ ನಡೆದ ಸೂಪರ್ ಓವರ್ ನಲ್ಲಿ ಭಾರತಕ್ಕೆ 17 ರನ್ ಗುರಿ ನೀಡಲಾಯಿತು, ಭಾರತ ತಂಡ 16 ರನ್ ಗಳಿಸಿ ಮತ್ತೊಮ್ಮೆ ಸೂಪರ್ ಓವರ್ ನತ್ತ ಪಂದ್ಯ ಹೆಜ್ಜೆ ಹಾಕಿತು, ಎರಡನೇ ಸೂಪರ್ ಓವರ್ ನಲ್ಲಿ ಭಾರತ ಕೇವಲ 11 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು.

ಆದರೆ ಭಾರತಕ್ಕೆ ಆಪತ್ಕಾಲದಲ್ಲಿ ಕೇವಲ 1 ರನ್ ನೀಡಿ ಎರಡು ವಿಕೆಟ್ ಪಡೆದು ರವಿ ಬಿಷ್ಣೋಯಿ ಭಾರತಕ್ಕೆ ಗೆಲುವಿನ ಉಡುಗೊರೆ ನೀಡಿದರು, ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆಲ್ ರೌಂಡರ್ ಪ್ರದರ್ಶನ ನೀಡಿದ್ದ ಶಿವಂ ದುಬೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

7 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

9 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

10 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

10 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago