ರೋಹಿತ್ – ರಿಂಕು ಅಬ್ಬರ , ಬಿಷ್ಣೋಯಿ ಬೌಲಿಂಗ್ ಗೆ ಮಂಕಾದ ಅಫ್ಘಾನ್, ಎರಡನೇ ಸೂಪರ್ ಓವರ್ ನಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಗರಿ..!

ಪ್ರತೀ ಹಂತದಲ್ಲೂ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ – ಆಫ್ಘಾನಿಸ್ತಾನದ ಮೂರನೇ ಪಂದ್ಯ ಎರಡು ಸೂಪರ್ ಓವರ್ ಗಳಿಗೆ ಸಾಕ್ಷಿಯಾಗಿದ್ದಲ್ಲದೆ ಭಾರತಕ್ಕೆ 3-0 ಅಂತರದಿಂದ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಗರಿ ಮುಡಿಗೇರಿಸಿಕೊಂಡಿತು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ, ಬ್ಯಾಟಿಂಗ್ ಆರಂಭಿಸಿತು. ಆದರೆ, ನಾಯಕ ರೋಹಿತ್ ಶರ್ಮಾ ಅವರ ನಿರೀಕ್ಷೆಗೆ ತಕ್ಕಂತೆ ಆಟ ನಡೆಯಲಿಲ್ಲ, ಕೇವಲ 22 ರನ್ ಗಳಿಸುವ ವೇಳೆಗೆ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (4), ವಿರಾಟ್ ಕೊಹ್ಲಿ (೦), ಆಲ್ ರೌಂಡರ್ ಶಿವಂ ದುಬೆ (1) ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (೦) ವಿಕೆಟ್ ಒಪ್ಪಿಸಿದರು.

ಆದರೂ ನಾಯಕ ರೋಹಿತ್ ಶರ್ಮಾ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (121) ರನ್ ಹಾಗೂ ರಿಂಕು ಸಿಂಗ್ 2 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 69 ರನ್ ಗಳಿಸಿ ದಾಖಲೆಯ 190 ರನ್ ಜೊತೆಯಾಟ ನಡೆಸಿ 212 ರನ್ ಗಳ ಬೃಹತ್ ಮೊತ್ತ ಕಲೆಹಾಕಿದರು.

ಆಫ್ಘಾನಿಸ್ತಾನದ ಪರವಾಗಿ ಅಹ್ಮದ್ ಮೂರು ವಿಕೆಟ್ ಕಬಳಿಸಿದರೆ ಅಜ್ಮತ್ ಉಲ್ಲಾ ಒಂದು ವಿಕೆಟ್ ಪಡೆದರು, ಉಳಿದ ಯಾವುದೇ ಬೌಲರ್ ಗಳು ವಿಕೆಟ್ ಪಡೆಯಲು ಪರದಾಡಿದರು ಹಾಗೂ ದುಬಾರಿಯಾದರು.

ಗುರಿ ಬೆನ್ನತ್ತಿದ್ದ ಆಫ್ಘನ್ ಪಡೆ ಉತ್ತಮ ಆರಂಭವನ್ನು ಪಡೆಯಿತು, ಆರಂಭಿಕ ಆಟಗಾರರಾದ ಗುಬಾ೯ಜ್ (50), ನಾಯಕ ಇಬ್ರಾಹಿಂ ಜದ್ರಾನ್ (50) ಮೊದಲ ವಿಕೆಟ್ ಗೆ 93 ರನ್ ಗಳಿಸಿದರು. ನಂತರ ಬಂದ ಗುಲ್ಬದ್ದಿನ್ (55) ಗಳಿಸಿ ಬಲ ತುಂಬಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಮೊಹಮ್ಮದ್ ನಬಿ ಬಿರುಸಿನ 34 ರನ್ ಗಳಿಸುವ ಮೂಲಕ ತಂಡ ಮೊತ್ತವನ್ನು ಗೆಲುವಿನ ಕಡೆ ಕೊಂಡೊಯ್ದರು ಸಹ ಗೆಲುವು ಸಿಗಲಿಲ್ಲ, ಕೇವಲ ಡ್ರಾಗೆ ತೃಪ್ತಿ ಪಡಬೇಕಾಯಿತು.

ನಂತರ ನಡೆದ ಸೂಪರ್ ಓವರ್ ನಲ್ಲಿ ಭಾರತಕ್ಕೆ 17 ರನ್ ಗುರಿ ನೀಡಲಾಯಿತು, ಭಾರತ ತಂಡ 16 ರನ್ ಗಳಿಸಿ ಮತ್ತೊಮ್ಮೆ ಸೂಪರ್ ಓವರ್ ನತ್ತ ಪಂದ್ಯ ಹೆಜ್ಜೆ ಹಾಕಿತು, ಎರಡನೇ ಸೂಪರ್ ಓವರ್ ನಲ್ಲಿ ಭಾರತ ಕೇವಲ 11 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು.

ಆದರೆ ಭಾರತಕ್ಕೆ ಆಪತ್ಕಾಲದಲ್ಲಿ ಕೇವಲ 1 ರನ್ ನೀಡಿ ಎರಡು ವಿಕೆಟ್ ಪಡೆದು ರವಿ ಬಿಷ್ಣೋಯಿ ಭಾರತಕ್ಕೆ ಗೆಲುವಿನ ಉಡುಗೊರೆ ನೀಡಿದರು, ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆಲ್ ರೌಂಡರ್ ಪ್ರದರ್ಶನ ನೀಡಿದ್ದ ಶಿವಂ ದುಬೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

12 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

17 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

19 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

23 hours ago