ರೋಹಿತ್ – ರಿಂಕು ಅಬ್ಬರ , ಬಿಷ್ಣೋಯಿ ಬೌಲಿಂಗ್ ಗೆ ಮಂಕಾದ ಅಫ್ಘಾನ್, ಎರಡನೇ ಸೂಪರ್ ಓವರ್ ನಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಗರಿ..!

ಪ್ರತೀ ಹಂತದಲ್ಲೂ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ – ಆಫ್ಘಾನಿಸ್ತಾನದ ಮೂರನೇ ಪಂದ್ಯ ಎರಡು ಸೂಪರ್ ಓವರ್ ಗಳಿಗೆ ಸಾಕ್ಷಿಯಾಗಿದ್ದಲ್ಲದೆ ಭಾರತಕ್ಕೆ 3-0 ಅಂತರದಿಂದ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಗರಿ ಮುಡಿಗೇರಿಸಿಕೊಂಡಿತು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ, ಬ್ಯಾಟಿಂಗ್ ಆರಂಭಿಸಿತು. ಆದರೆ, ನಾಯಕ ರೋಹಿತ್ ಶರ್ಮಾ ಅವರ ನಿರೀಕ್ಷೆಗೆ ತಕ್ಕಂತೆ ಆಟ ನಡೆಯಲಿಲ್ಲ, ಕೇವಲ 22 ರನ್ ಗಳಿಸುವ ವೇಳೆಗೆ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (4), ವಿರಾಟ್ ಕೊಹ್ಲಿ (೦), ಆಲ್ ರೌಂಡರ್ ಶಿವಂ ದುಬೆ (1) ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (೦) ವಿಕೆಟ್ ಒಪ್ಪಿಸಿದರು.

ಆದರೂ ನಾಯಕ ರೋಹಿತ್ ಶರ್ಮಾ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (121) ರನ್ ಹಾಗೂ ರಿಂಕು ಸಿಂಗ್ 2 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 69 ರನ್ ಗಳಿಸಿ ದಾಖಲೆಯ 190 ರನ್ ಜೊತೆಯಾಟ ನಡೆಸಿ 212 ರನ್ ಗಳ ಬೃಹತ್ ಮೊತ್ತ ಕಲೆಹಾಕಿದರು.

ಆಫ್ಘಾನಿಸ್ತಾನದ ಪರವಾಗಿ ಅಹ್ಮದ್ ಮೂರು ವಿಕೆಟ್ ಕಬಳಿಸಿದರೆ ಅಜ್ಮತ್ ಉಲ್ಲಾ ಒಂದು ವಿಕೆಟ್ ಪಡೆದರು, ಉಳಿದ ಯಾವುದೇ ಬೌಲರ್ ಗಳು ವಿಕೆಟ್ ಪಡೆಯಲು ಪರದಾಡಿದರು ಹಾಗೂ ದುಬಾರಿಯಾದರು.

ಗುರಿ ಬೆನ್ನತ್ತಿದ್ದ ಆಫ್ಘನ್ ಪಡೆ ಉತ್ತಮ ಆರಂಭವನ್ನು ಪಡೆಯಿತು, ಆರಂಭಿಕ ಆಟಗಾರರಾದ ಗುಬಾ೯ಜ್ (50), ನಾಯಕ ಇಬ್ರಾಹಿಂ ಜದ್ರಾನ್ (50) ಮೊದಲ ವಿಕೆಟ್ ಗೆ 93 ರನ್ ಗಳಿಸಿದರು. ನಂತರ ಬಂದ ಗುಲ್ಬದ್ದಿನ್ (55) ಗಳಿಸಿ ಬಲ ತುಂಬಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಮೊಹಮ್ಮದ್ ನಬಿ ಬಿರುಸಿನ 34 ರನ್ ಗಳಿಸುವ ಮೂಲಕ ತಂಡ ಮೊತ್ತವನ್ನು ಗೆಲುವಿನ ಕಡೆ ಕೊಂಡೊಯ್ದರು ಸಹ ಗೆಲುವು ಸಿಗಲಿಲ್ಲ, ಕೇವಲ ಡ್ರಾಗೆ ತೃಪ್ತಿ ಪಡಬೇಕಾಯಿತು.

ನಂತರ ನಡೆದ ಸೂಪರ್ ಓವರ್ ನಲ್ಲಿ ಭಾರತಕ್ಕೆ 17 ರನ್ ಗುರಿ ನೀಡಲಾಯಿತು, ಭಾರತ ತಂಡ 16 ರನ್ ಗಳಿಸಿ ಮತ್ತೊಮ್ಮೆ ಸೂಪರ್ ಓವರ್ ನತ್ತ ಪಂದ್ಯ ಹೆಜ್ಜೆ ಹಾಕಿತು, ಎರಡನೇ ಸೂಪರ್ ಓವರ್ ನಲ್ಲಿ ಭಾರತ ಕೇವಲ 11 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು.

ಆದರೆ ಭಾರತಕ್ಕೆ ಆಪತ್ಕಾಲದಲ್ಲಿ ಕೇವಲ 1 ರನ್ ನೀಡಿ ಎರಡು ವಿಕೆಟ್ ಪಡೆದು ರವಿ ಬಿಷ್ಣೋಯಿ ಭಾರತಕ್ಕೆ ಗೆಲುವಿನ ಉಡುಗೊರೆ ನೀಡಿದರು, ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆಲ್ ರೌಂಡರ್ ಪ್ರದರ್ಶನ ನೀಡಿದ್ದ ಶಿವಂ ದುಬೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

20 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago