ರೋಹಿತ್ – ರಿಂಕು ಅಬ್ಬರ , ಬಿಷ್ಣೋಯಿ ಬೌಲಿಂಗ್ ಗೆ ಮಂಕಾದ ಅಫ್ಘಾನ್, ಎರಡನೇ ಸೂಪರ್ ಓವರ್ ನಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಗರಿ..!

ಪ್ರತೀ ಹಂತದಲ್ಲೂ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ – ಆಫ್ಘಾನಿಸ್ತಾನದ ಮೂರನೇ ಪಂದ್ಯ ಎರಡು ಸೂಪರ್ ಓವರ್ ಗಳಿಗೆ ಸಾಕ್ಷಿಯಾಗಿದ್ದಲ್ಲದೆ ಭಾರತಕ್ಕೆ 3-0 ಅಂತರದಿಂದ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಗರಿ ಮುಡಿಗೇರಿಸಿಕೊಂಡಿತು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ, ಬ್ಯಾಟಿಂಗ್ ಆರಂಭಿಸಿತು. ಆದರೆ, ನಾಯಕ ರೋಹಿತ್ ಶರ್ಮಾ ಅವರ ನಿರೀಕ್ಷೆಗೆ ತಕ್ಕಂತೆ ಆಟ ನಡೆಯಲಿಲ್ಲ, ಕೇವಲ 22 ರನ್ ಗಳಿಸುವ ವೇಳೆಗೆ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (4), ವಿರಾಟ್ ಕೊಹ್ಲಿ (೦), ಆಲ್ ರೌಂಡರ್ ಶಿವಂ ದುಬೆ (1) ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (೦) ವಿಕೆಟ್ ಒಪ್ಪಿಸಿದರು.

ಆದರೂ ನಾಯಕ ರೋಹಿತ್ ಶರ್ಮಾ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (121) ರನ್ ಹಾಗೂ ರಿಂಕು ಸಿಂಗ್ 2 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 69 ರನ್ ಗಳಿಸಿ ದಾಖಲೆಯ 190 ರನ್ ಜೊತೆಯಾಟ ನಡೆಸಿ 212 ರನ್ ಗಳ ಬೃಹತ್ ಮೊತ್ತ ಕಲೆಹಾಕಿದರು.

ಆಫ್ಘಾನಿಸ್ತಾನದ ಪರವಾಗಿ ಅಹ್ಮದ್ ಮೂರು ವಿಕೆಟ್ ಕಬಳಿಸಿದರೆ ಅಜ್ಮತ್ ಉಲ್ಲಾ ಒಂದು ವಿಕೆಟ್ ಪಡೆದರು, ಉಳಿದ ಯಾವುದೇ ಬೌಲರ್ ಗಳು ವಿಕೆಟ್ ಪಡೆಯಲು ಪರದಾಡಿದರು ಹಾಗೂ ದುಬಾರಿಯಾದರು.

ಗುರಿ ಬೆನ್ನತ್ತಿದ್ದ ಆಫ್ಘನ್ ಪಡೆ ಉತ್ತಮ ಆರಂಭವನ್ನು ಪಡೆಯಿತು, ಆರಂಭಿಕ ಆಟಗಾರರಾದ ಗುಬಾ೯ಜ್ (50), ನಾಯಕ ಇಬ್ರಾಹಿಂ ಜದ್ರಾನ್ (50) ಮೊದಲ ವಿಕೆಟ್ ಗೆ 93 ರನ್ ಗಳಿಸಿದರು. ನಂತರ ಬಂದ ಗುಲ್ಬದ್ದಿನ್ (55) ಗಳಿಸಿ ಬಲ ತುಂಬಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಮೊಹಮ್ಮದ್ ನಬಿ ಬಿರುಸಿನ 34 ರನ್ ಗಳಿಸುವ ಮೂಲಕ ತಂಡ ಮೊತ್ತವನ್ನು ಗೆಲುವಿನ ಕಡೆ ಕೊಂಡೊಯ್ದರು ಸಹ ಗೆಲುವು ಸಿಗಲಿಲ್ಲ, ಕೇವಲ ಡ್ರಾಗೆ ತೃಪ್ತಿ ಪಡಬೇಕಾಯಿತು.

ನಂತರ ನಡೆದ ಸೂಪರ್ ಓವರ್ ನಲ್ಲಿ ಭಾರತಕ್ಕೆ 17 ರನ್ ಗುರಿ ನೀಡಲಾಯಿತು, ಭಾರತ ತಂಡ 16 ರನ್ ಗಳಿಸಿ ಮತ್ತೊಮ್ಮೆ ಸೂಪರ್ ಓವರ್ ನತ್ತ ಪಂದ್ಯ ಹೆಜ್ಜೆ ಹಾಕಿತು, ಎರಡನೇ ಸೂಪರ್ ಓವರ್ ನಲ್ಲಿ ಭಾರತ ಕೇವಲ 11 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು.

ಆದರೆ ಭಾರತಕ್ಕೆ ಆಪತ್ಕಾಲದಲ್ಲಿ ಕೇವಲ 1 ರನ್ ನೀಡಿ ಎರಡು ವಿಕೆಟ್ ಪಡೆದು ರವಿ ಬಿಷ್ಣೋಯಿ ಭಾರತಕ್ಕೆ ಗೆಲುವಿನ ಉಡುಗೊರೆ ನೀಡಿದರು, ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆಲ್ ರೌಂಡರ್ ಪ್ರದರ್ಶನ ನೀಡಿದ್ದ ಶಿವಂ ದುಬೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

6 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

7 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago