ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜಿಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ತಿಳಿಸಿದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ರೌಡಿಯಿಸಂ ಜೀವನವನ್ನು ಹಾಳು ಮಾಡುವುದಲ್ಲದೆ ಜೀವನ ಪರ್ಯಂತ ರೌಡಿಶೀಟರ್ ಪಟ್ಟ ಕಟ್ಟಿಕೊಂಡು ಬದುಕಬೇಕಾಗುತ್ತದೆ. ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬೇಕು. ಎಲ್ಲಾರು ಕಾನೂನನ್ನು ಗೌರವಿಸಬೇಕು. ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು ಹೀಗೆ ಮುಂದುವರೆದರೆ ಗಡಿಪಾರು ಮಾಡಲಾಗುವುದು. ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಬಸ್ಥರು ಗೌರವ ನೀಡುವಷ್ಟು ರೀತಿಯಲ್ಲಿಯಾದರೂ ಜೀವನ ಮಾಡಿ. ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆ ಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಮಾದರಿ ಜೀವನ ನಡೆಸಿದರೆ ರೌಡಿ ಶೀಟರ್ ಬಂದ್ ಮಾಡಲಾಗುವುದು ಎಂದರು.
ರೌಡಿಗಳಿಗೆ ಸಂಬಂಧಿಸಿದ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ವಾಹನ ದಾಖಲೆಗಳು ಸೇರಿದಂತೆ ಇತರೆ ದಾಖಲಾತಿಗಳನ್ನು ಸಂಗ್ರಹಿಸಬೇಕು. ಸದಾ ರೌಡಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿರಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್ ನೀಡಲಾಯಿತು.
ಈ ವೇಳೆ ಸಬ್ ಇನ್ಸ್ ಪೆಕ್ಟರ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…