ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜಿಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ತಿಳಿಸಿದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ರೌಡಿಯಿಸಂ ಜೀವನವನ್ನು ಹಾಳು ಮಾಡುವುದಲ್ಲದೆ ಜೀವನ ಪರ್ಯಂತ ರೌಡಿಶೀಟರ್ ಪಟ್ಟ ಕಟ್ಟಿಕೊಂಡು ಬದುಕಬೇಕಾಗುತ್ತದೆ. ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬೇಕು. ಎಲ್ಲಾರು ಕಾನೂನನ್ನು ಗೌರವಿಸಬೇಕು. ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು ಹೀಗೆ ಮುಂದುವರೆದರೆ ಗಡಿಪಾರು ಮಾಡಲಾಗುವುದು. ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಬಸ್ಥರು ಗೌರವ ನೀಡುವಷ್ಟು ರೀತಿಯಲ್ಲಿಯಾದರೂ ಜೀವನ ಮಾಡಿ. ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆ ಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಮಾದರಿ ಜೀವನ ನಡೆಸಿದರೆ ರೌಡಿ ಶೀಟರ್ ಬಂದ್ ಮಾಡಲಾಗುವುದು ಎಂದರು.
ರೌಡಿಗಳಿಗೆ ಸಂಬಂಧಿಸಿದ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ವಾಹನ ದಾಖಲೆಗಳು ಸೇರಿದಂತೆ ಇತರೆ ದಾಖಲಾತಿಗಳನ್ನು ಸಂಗ್ರಹಿಸಬೇಕು. ಸದಾ ರೌಡಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿರಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್ ನೀಡಲಾಯಿತು.
ಈ ವೇಳೆ ಸಬ್ ಇನ್ಸ್ ಪೆಕ್ಟರ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…