ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜಿಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ತಿಳಿಸಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ರೌಡಿಯಿಸಂ ಜೀವನವನ್ನು ಹಾಳು ಮಾಡುವುದಲ್ಲದೆ ಜೀವನ ಪರ್ಯಂತ ರೌಡಿಶೀಟರ್ ಪಟ್ಟ ಕಟ್ಟಿಕೊಂಡು ಬದುಕಬೇಕಾಗುತ್ತದೆ. ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬೇಕು. ಎಲ್ಲಾರು ಕಾನೂನನ್ನು ಗೌರವಿಸಬೇಕು. ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು ಹೀಗೆ ಮುಂದುವರೆದರೆ ಗಡಿಪಾರು ಮಾಡಲಾಗುವುದು. ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಬಸ್ಥರು ಗೌರವ ನೀಡುವಷ್ಟು ರೀತಿಯಲ್ಲಿಯಾದರೂ ಜೀವನ ಮಾಡಿ. ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆ ಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಮಾದರಿ ಜೀವನ ನಡೆಸಿದರೆ ರೌಡಿ ಶೀಟರ್ ಬಂದ್ ಮಾಡಲಾಗುವುದು ಎಂದರು.

ರೌಡಿಗಳಿಗೆ ಸಂಬಂಧಿಸಿದ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ವಾಹನ ದಾಖಲೆಗಳು ಸೇರಿದಂತೆ ಇತರೆ ದಾಖಲಾತಿಗಳನ್ನು ಸಂಗ್ರಹಿಸಬೇಕು.‌ ಸದಾ ರೌಡಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿರಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್ ನೀಡಲಾಯಿತು.

ಈ ವೇಳೆ ಸಬ್ ಇನ್ಸ್ ಪೆಕ್ಟರ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

2 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

5 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

6 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

14 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

24 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago