ರೌಡಿಯಿಸಂ, ಗೂಂಡಾಗಿರಿ, ಹವಾ ಮೇಂಟೈನ್ ಮಾಡೋದನ್ನ ಕೂಡಲೇ ಬಿಡಬೇಕು….. ಇಲ್ಲದಿದ್ದಲ್ಲಿ ಕಠಿಣ ಕ್ರಮ ಗ್ಯಾರೆಂಟಿ- ರೌಡಿಶೀಟರ್ ಗಳಿಗೆ ಡಿವೈಎಸ್ಪಿ ಪಾಂಡುರಂಗ ಖಡಕ್ ಎಚ್ಚರಿಕೆ

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜೀಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದರು.

ಹೊಸ ವರ್ಷಾಚರಣೆ ಹಿನ್ನೆಲೆ ನಗರ ಪೊಲೀಸ್ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ರೌಡಿಯಿಸಂ ಜೀವನವನ್ನು ಹಾಳು ಮಾಡುವುದಲ್ಲದೆ ಜೀವನ ಪರ್ಯಂತ ರೌಡಿಶೀಟರ್ ಪಟ್ಟ ಕಟ್ಟಿಕೊಂಡು ಬದುಕಬೇಕಾಗುತ್ತದೆ. ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬೇಕು. ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು ಹೀಗೆ ಮುಂದುವರೆದರೆ ಜಿಲ್ಲೆಯಿಂದಲೇ ಗಡಿಪಾರು ಮಾಡಲಾಗುವುದು. ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಬಸ್ಥರು ಗೌರವ ನೀಡುವಷ್ಟು ರೀತಿಯಲ್ಲಿಯಾದರೂ ಜೀವನ ಮಾಡಿ. ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆ ಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಮಾದರಿ ಜೀವನ ನಡೆಸಿದರೆ ರೌಡಿ ಶೀಟರ್ ಬಂದ್ ಮಾಡಲಾಗುವುದು ಎಂದರು.

ರೌಡಿಶೀಟರ್ ಗಳ ಜೀವನ ಶೈಲಿ ಸರಿ ಹೋದರೆ ಕೇವಲ ಎರಡು ತಿಂಗಳಲ್ಲಿ ರೌಡಿ ಶೀಟರ್ ಪಟ್ಟದಿಂದ ಮುಕ್ತಿಕಾಣಿಸಲಾಗುವುದು. ಮುಂದುವರೆದಿರೆ ಮತ್ತೊಂದು ಕೇಸ್ ಓಪನ್ ಆಗುತ್ತದೆ. ಎರಡ್ಮೂರು ತಿಂಗಳಿಗೆ ಮತ್ತೊಮ್ಮೆ ಪರಾಮರ್ಶೆ ಮಾಡಲಾಗುವುದು ಎಂದರು.

ಈ ವೇಳೆ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

5 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

8 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

10 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago