ರೌಡಿಶೀಟರ್, ಎನ್ಎಸ್ಎಸ್ ವಿದ್ಯಾರ್ಥಿಗಳು, ಇಲಾಖೆ ಸಿಬ್ಬಂದಿಯಿಂದ ಸ್ವಚ್ಛಗೊಂಡ ಗ್ರಾಮಾಂತರ ಠಾಣೆ

ಗೌರಿ ಗಣೇಶ ಹಬ್ಬ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ರೌಡಿಶೀಟರ್ ಗಳ ಪರೇಡ್ ನಡೆಸಿ ಅವರೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಜೊತೆಗೂಡಿ ಠಾಣೆ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು ಎಂದು ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೌಡಿ ಪರೇಡ್ ನಂತರ ಎಸ್.ಎಸ್.ಎಸ್ ವಿದ್ಯಾರ್ಥಿಗಳ ಜೊತೆಗೆ ರೌಡಿಶೀಟರ್ ಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ದೊಡ್ಡಬಳ್ಳಾಪುರ ಪೊಲೀಸ್ ವಸತಿ ನಿಲಯ ಸುತ್ತಮುತ್ತ ಸ್ವಚ್ಛಗೊಳಿಸುವಾಗ ಸುಮಾರು ನಾಲ್ಕು ಹಾವುಗಳು ಕಂಡುಬಂದಿದ್ದು, ಕೂಡಲೇ ಉರಗ ತಜ್ಞ ರಾಮಾಂಜಿನಿ ಅವರನ್ನು ಕರೆಯಿಸಿ ಹಾವುಗಳನ್ನು ಹಿಡಿದು ಸಂರಕ್ಷಣೆ ಮಾಡಲಾಯಿತು ಎಂದರು.

ಹಬ್ಬದ ಹೆಸರಲ್ಲಿ ಪುಂಡಾಟಿಕೆ, ರೌಡಿಸಂ ತೋರಿಸಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದರು.

ಈ ವೇಳೆ ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಎನ್ಎಸ್ಎಸ್ ಅಧಿಕಾರಿಗಳು,  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವರಾಮಚಂದ್ರ ಗೌಡ, ಪ್ರೊ.ಪ್ರಕಾಶ್ ಮಂಟೇದ, ಉಪನ್ಯಾಸಕರು, ಇಲಾಖೆ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

2 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

3 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

4 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

4 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

8 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

15 hours ago