ಗೌರಿ ಗಣೇಶ ಹಬ್ಬ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ರೌಡಿಶೀಟರ್ ಗಳ ಪರೇಡ್ ನಡೆಸಿ ಅವರೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಜೊತೆಗೂಡಿ ಠಾಣೆ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು ಎಂದು ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ತಿಳಿಸಿದರು.
ರೌಡಿ ಪರೇಡ್ ನಂತರ ಎಸ್.ಎಸ್.ಎಸ್ ವಿದ್ಯಾರ್ಥಿಗಳ ಜೊತೆಗೆ ರೌಡಿಶೀಟರ್ ಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ದೊಡ್ಡಬಳ್ಳಾಪುರ ಪೊಲೀಸ್ ವಸತಿ ನಿಲಯ ಸುತ್ತಮುತ್ತ ಸ್ವಚ್ಛಗೊಳಿಸುವಾಗ ಸುಮಾರು ನಾಲ್ಕು ಹಾವುಗಳು ಕಂಡುಬಂದಿದ್ದು, ಕೂಡಲೇ ಉರಗ ತಜ್ಞ ರಾಮಾಂಜಿನಿ ಅವರನ್ನು ಕರೆಯಿಸಿ ಹಾವುಗಳನ್ನು ಹಿಡಿದು ಸಂರಕ್ಷಣೆ ಮಾಡಲಾಯಿತು ಎಂದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…