ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ: ಪಿಎಸ್‌ಐ ಜಗದೇವಿಗೆ ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಣೆ

ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆ.27ರಂದು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ.

‘‘ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆದು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಿ ಪಿಎಸ್‌ಐ ನಡೆಯೂ ಅತ್ಯಂತ ಅಮಾನವೀಯ ಹಾಗೂ ಕ್ಷಮಿಸಲು ಸಾಧ್ಯವಾಗದ ಕೃತ್ಯವಾಗಿದೆ.ಸರಕಾರಿ ಅಧಿಕಾರಿಯ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ’’ ಎಂದು ಆದೇಶದಲ್ಲಿ ಕಟುವಾಗಿ ಟೀಕಿಸಿದ್ದಾರೆ.
ತನಿಖೆಗೂ ಹೆಜ್ಜೆ ಹೆಜ್ಜೆಗೂ ಲಂಚ..!

ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿವಾಸವಿರುವ ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಮಗಳ ಮೇಲೆ ಜಾನ್ಸ್‌ನ್‌ ಎಂಬುವವನು ಲೈಂಗಿಕದೌರ್ಜನ್ಯ ಎಸಗಿದ್ದ ಸಂಬಂಧ ದೂರು ನೀಡಿದ್ದರು. ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು.ಪ್ರಕರಣ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಪ್ರಕರಣದ ಪ್ರತಿ ಹಂತದಲ್ಲಿಸಂತ್ರಸ್ತೆ ತಾಯಿ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಆರೋಪಿ ಜಾನ್ಸ್‌ನನ್ನು ಕರೆತರಲು ಕಾರು ಬಾಡಿಗೆ ಹಾಗೂ ಇತರೆ ಖರ್ಚುಗಳಿಗೆ 25 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟು ಪಡೆದಿದ್ದರು.ಇದಾದ ಬಳಿಕ ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು 1 ಲಕ್ಷ ರೂ.ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.ಅಂತಿಮವಾಗಿ 75 ಸಾವಿರ ರೂ.ಗಳಿಗೆ ಒಪ್ಪಿಕೊಂಡು ಮುಂಗಡವಾಗಿ 5 ಸಾವಿರ ರೂ.ಲಂಚ ಪಡೆದಿದ್ದರು.

ಸೆ.2ರಂದು ದೂರುದಾರೆಗೆ ಕರೆಮಾಡಿದ್ದ ಪಿಎಸ್‌ಐ ಬಾಕಿ ಲಂಚ 70 ಸಾವಿರ ರೂ.ಗಳನ್ನು ಠಾಣಾ ಬರಹಗಾರ ಹಾಗೂ ಮತ್ತೊಬ್ಬ ಕಾನ್ಸ್‌ಟೆಬಲ್‌ಗೆ ತಲುಪಿಸುವಂತೆ ಒತ್ತಡ ಹೇರಿದ್ದರು.

ಅಧಿಕಾರಿಗಳ ಲಂಚಬೇಡಿಕೆಯಿಂದ ಬೇಸತ್ತ ದೂರುದಾರೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಸೆ.3ರಂದು ಪಿಎಸ್‌ಐ ಜಗದೇವಿ ಪರವಾಗಿ 50 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಠಾಣಾ ಬರಹಗಾರ ಕಾನ್ಸ್‌ಟೆಬಲ್‌ ಅಮರೇಶ್‌ರನ್ನು ಟ್ರ್ಯಾಪ್‌ ಮಾಡಿ ಬಂಧಿಸಿದ್ದರು. ಮತ್ತೊಬ್ಬ ಆರೋಪಿ ಕಾನ್ಸ್‌ಟೆಬಲ್‌ ಮಂಜುನಾಥ್‌ ಹಾಗೂ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದರು.

ಕಳೆದ 27 ದಿನಗಳಿಂದ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆಹೋಗಿದ್ದರು.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

17 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

23 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago