ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ.
ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.
ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಮಾತುಕತೆ ನಡೆದು ₹1 ಲಕ್ಷಕ್ಕೆ ಡೀಲ್ ಕುದುರಿಸಿದ್ದರು.
ಕಳೆದ ಕೆಲ ದಿನಗಳ ಹಿಂದೆ ನಂದೀಶ್ ಅವರು ಭೂ ಮಾಪಕ ಅಧಿಕಾರಿ ವೀರಣ್ಣಗೆ ₹20 ಸಾವಿರ ನೀಡಿದ್ದರು. ಉಳಿದ ₹80 ಸಾವಿರ ಲಂಚಕ್ಕೆ ವೀರಣ್ಣ ಸತಾಯಿಸುತ್ತಿದ್ದರು.
ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ನಂದೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಂದೀಶ್ ಅವರು ವೀರಣ್ಣ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವೀರಣ್ಣ ಹಾಗೂ ಮಧ್ಯವರ್ತಿ ಸತೀಶ್ ನನ್ನು ಬಂಧಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದಷ್ಟೇ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲಡ ಲೋಕಾಯುಕ್ತ ದಾಳಿ ನಡೆದಿತ್ತು. ಅಂದು ಉಪ ಲೋಕಾಯುಕ್ತರಾದ ನ್ಯಾ.ಫಣೀಂದ್ರ ಅವರು ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ್ದರು. ಅಂದಿನ ಸಭೆಯಲ್ಲಿ ಕೆಲ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಪರ ವಕಾಲತ್ತು ವಹಿಸಿ, ಯಾವುದೇ ಸಮಸ್ಯೆ, ಭ್ರಷ್ಟಾಚಾರ ಇಲ್ಲ ಎಂದು ಹೇಳಿದ್ದರು.
ಸೋಮವಾರದ ಲೋಕಾಯುಕ್ತ ಕಾರ್ಯಾಚರಣೆಯು ಎಸ್ಪಿಪವನ್ ನಜ್ಜೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ರಮೇಶ್ ಜೆ. ನೇತೃತ್ವದಲ್ಲಿ ನಡೆಯಿತು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…