ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ ಅಧಿಕಾರಿ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕಾರ ಆರೋಪ

ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ.

ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.

ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಮಾತುಕತೆ ನಡೆದು ₹1 ಲಕ್ಷಕ್ಕೆ ಡೀಲ್ ಕುದುರಿಸಿದ್ದರು.

ಕಳೆದ ಕೆಲ ದಿ‌ನಗಳ ಹಿಂದೆ ನಂದೀಶ್ ಅವರು ಭೂ ಮಾಪಕ ಅಧಿಕಾರಿ ವೀರಣ್ಣಗೆ ₹20 ಸಾವಿರ ನೀಡಿದ್ದರು. ಉಳಿದ ₹80 ಸಾವಿರ ಲಂಚಕ್ಕೆ ವೀರಣ್ಣ ಸತಾಯಿಸುತ್ತಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ನಂದೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಂದೀಶ್ ಅವರು ವೀರಣ್ಣ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವೀರಣ್ಣ ಹಾಗೂ ಮಧ್ಯವರ್ತಿ ಸತೀಶ್ ನನ್ನು ಬಂಧಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದಷ್ಟೇ ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲಡ ಲೋಕಾಯುಕ್ತ ದಾಳಿ ನಡೆದಿತ್ತು. ಅಂದು ಉಪ ಲೋಕಾಯುಕ್ತರಾದ ನ್ಯಾ.ಫಣೀಂದ್ರ ಅವರು ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ್ದರು. ಅಂದಿನ ಸಭೆಯಲ್ಲಿ ಕೆಲ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಪರ ವಕಾಲತ್ತು ವಹಿಸಿ, ಯಾವುದೇ ಸಮಸ್ಯೆ, ಭ್ರಷ್ಟಾಚಾರ ಇಲ್ಲ‌ ಎಂದು ಹೇಳಿದ್ದರು.

ಸೋಮವಾರದ ಲೋಕಾಯುಕ್ತ ಕಾರ್ಯಾಚರಣೆಯು ಎಸ್ಪಿ‌ಪವನ್ ನಜ್ಜೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ರಮೇಶ್ ಜೆ. ನೇತೃತ್ವದಲ್ಲಿ ನಡೆಯಿತು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago