ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ ಅಧಿಕಾರಿ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕಾರ ಆರೋಪ

ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ.

ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.

ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಮಾತುಕತೆ ನಡೆದು ₹1 ಲಕ್ಷಕ್ಕೆ ಡೀಲ್ ಕುದುರಿಸಿದ್ದರು.

ಕಳೆದ ಕೆಲ ದಿ‌ನಗಳ ಹಿಂದೆ ನಂದೀಶ್ ಅವರು ಭೂ ಮಾಪಕ ಅಧಿಕಾರಿ ವೀರಣ್ಣಗೆ ₹20 ಸಾವಿರ ನೀಡಿದ್ದರು. ಉಳಿದ ₹80 ಸಾವಿರ ಲಂಚಕ್ಕೆ ವೀರಣ್ಣ ಸತಾಯಿಸುತ್ತಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ನಂದೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಂದೀಶ್ ಅವರು ವೀರಣ್ಣ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವೀರಣ್ಣ ಹಾಗೂ ಮಧ್ಯವರ್ತಿ ಸತೀಶ್ ನನ್ನು ಬಂಧಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದಷ್ಟೇ ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲಡ ಲೋಕಾಯುಕ್ತ ದಾಳಿ ನಡೆದಿತ್ತು. ಅಂದು ಉಪ ಲೋಕಾಯುಕ್ತರಾದ ನ್ಯಾ.ಫಣೀಂದ್ರ ಅವರು ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ್ದರು. ಅಂದಿನ ಸಭೆಯಲ್ಲಿ ಕೆಲ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಪರ ವಕಾಲತ್ತು ವಹಿಸಿ, ಯಾವುದೇ ಸಮಸ್ಯೆ, ಭ್ರಷ್ಟಾಚಾರ ಇಲ್ಲ‌ ಎಂದು ಹೇಳಿದ್ದರು.

ಸೋಮವಾರದ ಲೋಕಾಯುಕ್ತ ಕಾರ್ಯಾಚರಣೆಯು ಎಸ್ಪಿ‌ಪವನ್ ನಜ್ಜೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ರಮೇಶ್ ಜೆ. ನೇತೃತ್ವದಲ್ಲಿ ನಡೆಯಿತು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago