ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ ಅಧಿಕಾರಿ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕಾರ ಆರೋಪ

ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ.

ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.

ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಮಾತುಕತೆ ನಡೆದು ₹1 ಲಕ್ಷಕ್ಕೆ ಡೀಲ್ ಕುದುರಿಸಿದ್ದರು.

ಕಳೆದ ಕೆಲ ದಿ‌ನಗಳ ಹಿಂದೆ ನಂದೀಶ್ ಅವರು ಭೂ ಮಾಪಕ ಅಧಿಕಾರಿ ವೀರಣ್ಣಗೆ ₹20 ಸಾವಿರ ನೀಡಿದ್ದರು. ಉಳಿದ ₹80 ಸಾವಿರ ಲಂಚಕ್ಕೆ ವೀರಣ್ಣ ಸತಾಯಿಸುತ್ತಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ನಂದೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಂದೀಶ್ ಅವರು ವೀರಣ್ಣ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವೀರಣ್ಣ ಹಾಗೂ ಮಧ್ಯವರ್ತಿ ಸತೀಶ್ ನನ್ನು ಬಂಧಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದಷ್ಟೇ ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲಡ ಲೋಕಾಯುಕ್ತ ದಾಳಿ ನಡೆದಿತ್ತು. ಅಂದು ಉಪ ಲೋಕಾಯುಕ್ತರಾದ ನ್ಯಾ.ಫಣೀಂದ್ರ ಅವರು ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ್ದರು. ಅಂದಿನ ಸಭೆಯಲ್ಲಿ ಕೆಲ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಪರ ವಕಾಲತ್ತು ವಹಿಸಿ, ಯಾವುದೇ ಸಮಸ್ಯೆ, ಭ್ರಷ್ಟಾಚಾರ ಇಲ್ಲ‌ ಎಂದು ಹೇಳಿದ್ದರು.

ಸೋಮವಾರದ ಲೋಕಾಯುಕ್ತ ಕಾರ್ಯಾಚರಣೆಯು ಎಸ್ಪಿ‌ಪವನ್ ನಜ್ಜೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ರಮೇಶ್ ಜೆ. ನೇತೃತ್ವದಲ್ಲಿ ನಡೆಯಿತು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

13 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago