ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ ಅಧಿಕಾರಿ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕಾರ ಆರೋಪ

ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ.

ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.

ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಮಾತುಕತೆ ನಡೆದು ₹1 ಲಕ್ಷಕ್ಕೆ ಡೀಲ್ ಕುದುರಿಸಿದ್ದರು.

ಕಳೆದ ಕೆಲ ದಿ‌ನಗಳ ಹಿಂದೆ ನಂದೀಶ್ ಅವರು ಭೂ ಮಾಪಕ ಅಧಿಕಾರಿ ವೀರಣ್ಣಗೆ ₹20 ಸಾವಿರ ನೀಡಿದ್ದರು. ಉಳಿದ ₹80 ಸಾವಿರ ಲಂಚಕ್ಕೆ ವೀರಣ್ಣ ಸತಾಯಿಸುತ್ತಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ನಂದೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಂದೀಶ್ ಅವರು ವೀರಣ್ಣ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವೀರಣ್ಣ ಹಾಗೂ ಮಧ್ಯವರ್ತಿ ಸತೀಶ್ ನನ್ನು ಬಂಧಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದಷ್ಟೇ ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲಡ ಲೋಕಾಯುಕ್ತ ದಾಳಿ ನಡೆದಿತ್ತು. ಅಂದು ಉಪ ಲೋಕಾಯುಕ್ತರಾದ ನ್ಯಾ.ಫಣೀಂದ್ರ ಅವರು ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ್ದರು. ಅಂದಿನ ಸಭೆಯಲ್ಲಿ ಕೆಲ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಪರ ವಕಾಲತ್ತು ವಹಿಸಿ, ಯಾವುದೇ ಸಮಸ್ಯೆ, ಭ್ರಷ್ಟಾಚಾರ ಇಲ್ಲ‌ ಎಂದು ಹೇಳಿದ್ದರು.

ಸೋಮವಾರದ ಲೋಕಾಯುಕ್ತ ಕಾರ್ಯಾಚರಣೆಯು ಎಸ್ಪಿ‌ಪವನ್ ನಜ್ಜೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ರಮೇಶ್ ಜೆ. ನೇತೃತ್ವದಲ್ಲಿ ನಡೆಯಿತು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

46 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago