ಗುತ್ತಿಗೆದಾರನ ಬಳಿ 2 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎನ್ನಲಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದಿರುವ ಸಹಾಯಕ ಕೃಷಿ ಅಧಿಕಾರಿ ಹೆಸರು ಶಂಕರಯ್ಯ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಈ ವೇಳೆ ಶಂಕರಯ್ಯ ಬ್ಯಾಗ್ ಚೆಕ್ ಮಾಡಿದಾಗ ಬ್ಯಾಗ್ ನಲ್ಲಿ ಹದಿಮೂರು ಲಕ್ಷದ ಮೂರು ಸಾವಿರದ ಮೂರು ರೂಪಾಯಿಗಳ ಕಂತೆ ಕಂತೆ ಹಣ ಪತ್ತೆಯಾಗಿದೆ.
ಈ ವೇಳೆ ಅಧಿಕಾರಿಗಳು ಹಣ ಎಣಿಸಲು ಮಷಿನ್ ತರಿಸಿಕೊಂಡಿದ್ದಾರೆ. 2 ಲಕ್ಷ ಲಂಚ ಮುಂಗಡವಾಗಿ ಶಂಕರಯ್ಯ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಕಚೇರಿಯ ಅಧಿಕಾರಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…