ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಜಲಾಶಯ ನಿರ್ಮಾಣಕ್ಕೆ ರೈತರ ವಿರೋಧ ವಿಚಾರ: ಇಂದು ರಾಜ್ಯಪಾಲರನ್ನ ಭೇಟಿಯಾದ ರೈತರ ನಿಯೋಗ: ಡ್ಯಾಂ ನಿರ್ಮಾಣ ಮಾಡದಂತೆ ರಾಜ್ಯಪಾಲರಲ್ಲಿ ಮನವಿ

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಲಾಗಿದೆ.

ಇದರ ಕುರಿತು ರಾಜ್ಯಪಾಲರ ಗಮನಕ್ಕೆ ತರಲು ಸುಮಾರು ಹತ್ತೂರಿನ ರೈತರ ನಿಯೋಗ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣ ಮಾಡದಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಲಾಯಿತು.

ಜಲಾಶಯ ನಿರ್ಮಾಣ ಮಾಡಲು ಪರಿಸರ ಕಾಯ್ದೆ ಉಲ್ಲಂಘನೆ, ರೈತರ ಅಭಿಪ್ರಾಯ ಕೇಳದೇ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಒಂದು ವೇಳೆ ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ‌ನಲ್ಲಿ ಸುಮಾರು 2.45 ಟಿಎಂಸಿ ನೀರು ಶೇಖರಣೆಯಾಗುತ್ತದೆ. 7 ಗ್ರಾಮಗಳು(ಶ್ರೀರಾಮನಹಳ್ಳಿ, ದಾಸರಪಾಳ್ಯ, ಶಿಂಗೇನಗಳ್ಳಿ, ಗಾಣದಾಳು, ಹನುಮಂತಯ್ಯನಪಾಳ್ಯ, ನರಸಾಪುರ, ಲಕ್ಕೇನಹಳ್ಳಿ) ಸಂಪೂರ್ಣ ಮುಳುಗಡೆಯಾಗುತ್ತವೆ. ಸುಮಾರು 2,673 ಎಕರೆ ಫಲವತ್ತಾದ ಜಮೀನು ನಾಶವಾಗುತ್ತದೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಫಲವತ್ತಾದ ಭೂಮಿ ಜಲಾವೃತವಾಗುತ್ತದೆ. ರೈತರು ಮನೆ, ಹೊಲ ಕಳೆದುಕೊಂಡು ಅನಾಥರಾಗುತ್ತೇವೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಸುಮಾರು 1,200 ಎಕರೆಯಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. 1, 400 ಎಕರೆಯಲ್ಲಿ ತರಕಾರಿ, ಜೋಳ, ರಾಗಿ ಸೇರಿದಂತೆ ಇತರೆ  ಬೆಳೆಗಳನ್ನು ಬೆಳೆಯಲಾಗುತ್ತದೆ. ವಾರ್ಷಿಕವಾಗಿ 20 ಕೋಟಿಗೂ ಹೆಚ್ಚು ಅಡಿಕೆ ವಹಿವಾಟು ಮಾಡಲಾಗುತ್ತದೆ. 10 ಕೋಟಿಗೂ ಹೆಚ್ಚು ರಾಗಿ, ಜೋಳ, ತರಕಾರಿ ಸೇರಿದಂತೆ ಇತರೆ ಬೆಳೆಗಳ ವಹಿವಾಟು ನಡೆಯುತ್ತದೆ ಎಂದು ತಿಳಿಸಿದರು.

ಕೂಡಲೇ ಸ್ಥಳ ಪರಿಶೀಲನೆಗೆ ತಜ್ಞರ ತಂಡವನ್ನು ರಚನೆ ಮಾಡಬೇಕು. ಸರ್ಕಾರದಿಂದ ಎತ್ತಿನಹೊಳೆ ಯೋಜನೆಯ ವಿಸ್ತೃತ ವರದಿಯನ್ನು ತಾವು ಪರಿಶೀಲಿಸಬೇಕು. ಡ್ಯಾಂ ನಿರ್ಮಾಣದ ವಿಚಾರದಲ್ಲಿ ಸರ್ಕಾರಕ್ಕೆ ಗೊಂದಲವಿದೆ. ರೈತರಲ್ಲಿ ಆತಂಕ‌ ಮೂಡಿಸಲಾಗುತ್ತಿದೆ. ಈ ಕುರಿತು ರಾಷ್ಟ್ರಪತಿ, ಕೇಂದ್ರ ಸರ್ಕಾರ,‌ ರಾಜ್ಯ ಸರ್ಕಾರದ ಗಮನಕ್ಕೂ ತರಬೇಕು. ನಮ್ಮ ಊರಲ್ಲಿ ಡ್ಯಾಂ ನಿರ್ಮಾಣವಾಗದಂತೆ ತಡೆ‌ಹಿಡಿಯಬೇಕು ಎಂದು ಮನವಿ ಮಾಡಿದರು.

ರೈತರ ಮನವಿ ಸ್ವೀಕರಿಸಿ‌ದ ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಕ್ರಿಯಿಸಿ, ರೈತರ ಮನವಿಯನ್ನು ಕೂಡಲೇ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು. ಸರ್ಕಾರದಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಕಾರತ್ಮಕವಾಗಿ ಉತ್ತರಿಸಿರುವುದಾಗಿ ರೈತರು ಹೇಳಿದ್ದಾರೆ.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

2 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

5 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

6 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

9 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

9 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

9 hours ago