ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಜಲಾಶಯ ನಿರ್ಮಾಣಕ್ಕೆ ರೈತರ ವಿರೋಧ ವಿಚಾರ: ಇಂದು ರಾಜ್ಯಪಾಲರನ್ನ ಭೇಟಿಯಾದ ರೈತರ ನಿಯೋಗ: ಡ್ಯಾಂ ನಿರ್ಮಾಣ ಮಾಡದಂತೆ ರಾಜ್ಯಪಾಲರಲ್ಲಿ ಮನವಿ

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಲಾಗಿದೆ.

ಇದರ ಕುರಿತು ರಾಜ್ಯಪಾಲರ ಗಮನಕ್ಕೆ ತರಲು ಸುಮಾರು ಹತ್ತೂರಿನ ರೈತರ ನಿಯೋಗ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣ ಮಾಡದಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಲಾಯಿತು.

ಜಲಾಶಯ ನಿರ್ಮಾಣ ಮಾಡಲು ಪರಿಸರ ಕಾಯ್ದೆ ಉಲ್ಲಂಘನೆ, ರೈತರ ಅಭಿಪ್ರಾಯ ಕೇಳದೇ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಒಂದು ವೇಳೆ ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ‌ನಲ್ಲಿ ಸುಮಾರು 2.45 ಟಿಎಂಸಿ ನೀರು ಶೇಖರಣೆಯಾಗುತ್ತದೆ. 7 ಗ್ರಾಮಗಳು(ಶ್ರೀರಾಮನಹಳ್ಳಿ, ದಾಸರಪಾಳ್ಯ, ಶಿಂಗೇನಗಳ್ಳಿ, ಗಾಣದಾಳು, ಹನುಮಂತಯ್ಯನಪಾಳ್ಯ, ನರಸಾಪುರ, ಲಕ್ಕೇನಹಳ್ಳಿ) ಸಂಪೂರ್ಣ ಮುಳುಗಡೆಯಾಗುತ್ತವೆ. ಸುಮಾರು 2,673 ಎಕರೆ ಫಲವತ್ತಾದ ಜಮೀನು ನಾಶವಾಗುತ್ತದೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಫಲವತ್ತಾದ ಭೂಮಿ ಜಲಾವೃತವಾಗುತ್ತದೆ. ರೈತರು ಮನೆ, ಹೊಲ ಕಳೆದುಕೊಂಡು ಅನಾಥರಾಗುತ್ತೇವೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಸುಮಾರು 1,200 ಎಕರೆಯಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. 1, 400 ಎಕರೆಯಲ್ಲಿ ತರಕಾರಿ, ಜೋಳ, ರಾಗಿ ಸೇರಿದಂತೆ ಇತರೆ  ಬೆಳೆಗಳನ್ನು ಬೆಳೆಯಲಾಗುತ್ತದೆ. ವಾರ್ಷಿಕವಾಗಿ 20 ಕೋಟಿಗೂ ಹೆಚ್ಚು ಅಡಿಕೆ ವಹಿವಾಟು ಮಾಡಲಾಗುತ್ತದೆ. 10 ಕೋಟಿಗೂ ಹೆಚ್ಚು ರಾಗಿ, ಜೋಳ, ತರಕಾರಿ ಸೇರಿದಂತೆ ಇತರೆ ಬೆಳೆಗಳ ವಹಿವಾಟು ನಡೆಯುತ್ತದೆ ಎಂದು ತಿಳಿಸಿದರು.

ಕೂಡಲೇ ಸ್ಥಳ ಪರಿಶೀಲನೆಗೆ ತಜ್ಞರ ತಂಡವನ್ನು ರಚನೆ ಮಾಡಬೇಕು. ಸರ್ಕಾರದಿಂದ ಎತ್ತಿನಹೊಳೆ ಯೋಜನೆಯ ವಿಸ್ತೃತ ವರದಿಯನ್ನು ತಾವು ಪರಿಶೀಲಿಸಬೇಕು. ಡ್ಯಾಂ ನಿರ್ಮಾಣದ ವಿಚಾರದಲ್ಲಿ ಸರ್ಕಾರಕ್ಕೆ ಗೊಂದಲವಿದೆ. ರೈತರಲ್ಲಿ ಆತಂಕ‌ ಮೂಡಿಸಲಾಗುತ್ತಿದೆ. ಈ ಕುರಿತು ರಾಷ್ಟ್ರಪತಿ, ಕೇಂದ್ರ ಸರ್ಕಾರ,‌ ರಾಜ್ಯ ಸರ್ಕಾರದ ಗಮನಕ್ಕೂ ತರಬೇಕು. ನಮ್ಮ ಊರಲ್ಲಿ ಡ್ಯಾಂ ನಿರ್ಮಾಣವಾಗದಂತೆ ತಡೆ‌ಹಿಡಿಯಬೇಕು ಎಂದು ಮನವಿ ಮಾಡಿದರು.

ರೈತರ ಮನವಿ ಸ್ವೀಕರಿಸಿ‌ದ ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಕ್ರಿಯಿಸಿ, ರೈತರ ಮನವಿಯನ್ನು ಕೂಡಲೇ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು. ಸರ್ಕಾರದಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಕಾರತ್ಮಕವಾಗಿ ಉತ್ತರಿಸಿರುವುದಾಗಿ ರೈತರು ಹೇಳಿದ್ದಾರೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

5 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

7 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

19 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

19 hours ago