ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಜಲಾಶಯ ನಿರ್ಮಾಣಕ್ಕೆ ರೈತರ ವಿರೋಧ ವಿಚಾರ: ಇಂದು ರಾಜ್ಯಪಾಲರನ್ನ ಭೇಟಿಯಾದ ರೈತರ ನಿಯೋಗ: ಡ್ಯಾಂ ನಿರ್ಮಾಣ ಮಾಡದಂತೆ ರಾಜ್ಯಪಾಲರಲ್ಲಿ ಮನವಿ

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಲಾಗಿದೆ.

ಇದರ ಕುರಿತು ರಾಜ್ಯಪಾಲರ ಗಮನಕ್ಕೆ ತರಲು ಸುಮಾರು ಹತ್ತೂರಿನ ರೈತರ ನಿಯೋಗ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣ ಮಾಡದಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಲಾಯಿತು.

ಜಲಾಶಯ ನಿರ್ಮಾಣ ಮಾಡಲು ಪರಿಸರ ಕಾಯ್ದೆ ಉಲ್ಲಂಘನೆ, ರೈತರ ಅಭಿಪ್ರಾಯ ಕೇಳದೇ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಒಂದು ವೇಳೆ ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ‌ನಲ್ಲಿ ಸುಮಾರು 2.45 ಟಿಎಂಸಿ ನೀರು ಶೇಖರಣೆಯಾಗುತ್ತದೆ. 7 ಗ್ರಾಮಗಳು(ಶ್ರೀರಾಮನಹಳ್ಳಿ, ದಾಸರಪಾಳ್ಯ, ಶಿಂಗೇನಗಳ್ಳಿ, ಗಾಣದಾಳು, ಹನುಮಂತಯ್ಯನಪಾಳ್ಯ, ನರಸಾಪುರ, ಲಕ್ಕೇನಹಳ್ಳಿ) ಸಂಪೂರ್ಣ ಮುಳುಗಡೆಯಾಗುತ್ತವೆ. ಸುಮಾರು 2,673 ಎಕರೆ ಫಲವತ್ತಾದ ಜಮೀನು ನಾಶವಾಗುತ್ತದೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಫಲವತ್ತಾದ ಭೂಮಿ ಜಲಾವೃತವಾಗುತ್ತದೆ. ರೈತರು ಮನೆ, ಹೊಲ ಕಳೆದುಕೊಂಡು ಅನಾಥರಾಗುತ್ತೇವೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಸುಮಾರು 1,200 ಎಕರೆಯಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. 1, 400 ಎಕರೆಯಲ್ಲಿ ತರಕಾರಿ, ಜೋಳ, ರಾಗಿ ಸೇರಿದಂತೆ ಇತರೆ  ಬೆಳೆಗಳನ್ನು ಬೆಳೆಯಲಾಗುತ್ತದೆ. ವಾರ್ಷಿಕವಾಗಿ 20 ಕೋಟಿಗೂ ಹೆಚ್ಚು ಅಡಿಕೆ ವಹಿವಾಟು ಮಾಡಲಾಗುತ್ತದೆ. 10 ಕೋಟಿಗೂ ಹೆಚ್ಚು ರಾಗಿ, ಜೋಳ, ತರಕಾರಿ ಸೇರಿದಂತೆ ಇತರೆ ಬೆಳೆಗಳ ವಹಿವಾಟು ನಡೆಯುತ್ತದೆ ಎಂದು ತಿಳಿಸಿದರು.

ಕೂಡಲೇ ಸ್ಥಳ ಪರಿಶೀಲನೆಗೆ ತಜ್ಞರ ತಂಡವನ್ನು ರಚನೆ ಮಾಡಬೇಕು. ಸರ್ಕಾರದಿಂದ ಎತ್ತಿನಹೊಳೆ ಯೋಜನೆಯ ವಿಸ್ತೃತ ವರದಿಯನ್ನು ತಾವು ಪರಿಶೀಲಿಸಬೇಕು. ಡ್ಯಾಂ ನಿರ್ಮಾಣದ ವಿಚಾರದಲ್ಲಿ ಸರ್ಕಾರಕ್ಕೆ ಗೊಂದಲವಿದೆ. ರೈತರಲ್ಲಿ ಆತಂಕ‌ ಮೂಡಿಸಲಾಗುತ್ತಿದೆ. ಈ ಕುರಿತು ರಾಷ್ಟ್ರಪತಿ, ಕೇಂದ್ರ ಸರ್ಕಾರ,‌ ರಾಜ್ಯ ಸರ್ಕಾರದ ಗಮನಕ್ಕೂ ತರಬೇಕು. ನಮ್ಮ ಊರಲ್ಲಿ ಡ್ಯಾಂ ನಿರ್ಮಾಣವಾಗದಂತೆ ತಡೆ‌ಹಿಡಿಯಬೇಕು ಎಂದು ಮನವಿ ಮಾಡಿದರು.

ರೈತರ ಮನವಿ ಸ್ವೀಕರಿಸಿ‌ದ ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಕ್ರಿಯಿಸಿ, ರೈತರ ಮನವಿಯನ್ನು ಕೂಡಲೇ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು. ಸರ್ಕಾರದಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಕಾರತ್ಮಕವಾಗಿ ಉತ್ತರಿಸಿರುವುದಾಗಿ ರೈತರು ಹೇಳಿದ್ದಾರೆ.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

5 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

7 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

11 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

13 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago