ಲಕ್ಕೇನಹಳ್ಳಿ ಡ್ಯಾಂ ನಿರ್ಮಾಣ- 2.45 ಟಿಎಂಸಿ ನೀರು ಶೇಖರಣೆ- 7 ಗ್ರಾಮ ಸಂಪೂರ್ಣ ಮುಳುಗಡೆ- 2,673 ಎಕರೆ ಫಲವತ್ತಾದ ಜಮೀನು ನಾಶ- ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ- ರೈತರ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ(ಡ್ಯಾಂ) ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ನಾವು ರೈತರು, ನಮ್ಮ ಜೀವನ ಭೂಮಿ ತಾಯಿಯ‌ ಮಡಿಲಿನಲ್ಲಿದೆ. ಆ ಯೋಜನೆ, ಈ ಯೋಜನೆ ಹೆಸರಲ್ಲಿ ನಮ್ಮಿಂದ ಭೂಮಿ ಕಸಿದುಕೊಂಡು ನಮ್ಮನ್ನು ಅನಾಥರನ್ನಾಗಿ ಮಾಡಬೇಡಿ. ನಮ್ಮ ಬಳಿ ಭೂಮಿ ಇದ್ರೆ ಬೆಳೆ ಬೆಳೆದು ನಾವು ತಿಂದು ಇನ್ನೊಬ್ಬರಿಗೂ ಅನ್ನ ನೀಡುತ್ತೇವೆ. ಅಂತವರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿಬೇಡಿ ಎಂದು ರೈತ ಗೋವಿಂದರಾಜು ಆಗ್ರಹಿಸಿದ್ದಾರೆ.

ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣ ಮಾಡಿದರೆ ಡ್ಯಾಂ‌ನಲ್ಲಿ ಸುಮಾರು 2.45 ಟಿಎಂಸಿ ನೀರು ಶೇಖರಣೆಯಾಗುತ್ತದೆ. 7 ಗ್ರಾಮಗಳು(ಶ್ರೀರಾಮನಹಳ್ಳಿ, ದಾಸರಪಾಳ್ಯ, ಶಿಂಗೇನಗಳ್ಳಿ, ಗಾಣದಾಳು, ಹನುಮಂತಯ್ಯನಪಾಳ್ಯ, ನರಸಾಪುರ, ಲಕ್ಕೇನಹಳ್ಳಿ) ಸಂಪೂರ್ಣ ಮುಳುಗಡೆಯಾಗುತ್ತವೆ. ಸುಮಾರು 2,673 ಎಕರೆ ಫಲವತ್ತಾದ ಜಮೀನು ನಾಶವಾಗುತ್ತದೆ ಎಂದು ನರಸಿಂಹಮೂರ್ತಿ ಹೇಳಿದರು.

ಐದು ಗ್ರಾಮಗಳ (ಗರಡಗಲ್ಲು, ಮಚ್ಚೇನಹಳ್ಳಿ, ಲಕ್ಕೇನಹಳ್ಳಿ, ಕನಕೇನಹಳ್ಳಿ, ಸಾಸಲು) ಜಮೀನುಗಳಲ್ಲಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಪೈಪ್ ಲೈನ್ ನಡೆದಿರುವ ಜಾಗಕ್ಕೆ ಸರ್ಕಾರದಿಂದ ಒಂದು ಗುಂಟೆಗೆ 1 ಲಕ್ಷದ 43 ಸಾವಿರ ರೂ. ಪರಿಹಾರ ನೀಡಬೇಕೆಂದು ಆದೇಶವಿದೆ. ಆದರೆ. ರೈತರಿಗೆ ಕೇವಲ 83 ಸಾವಿರ ರೂ. ಮಾತ್ರ ನೀಡಿ‌ ಮಿಕ್ಕುಳಿದ ಹಣವನ್ನು ಮಧ್ಯವರ್ತಿಗಳು ಲಪಟಾಯಿಸುತ್ತಿದ್ದಾರೆ ಎಂದರು.

ಸಾಸಲು ಹೋಬಳಿಯಲ್ಲಿ ಸುಮಾರು 1,200 ಎಕರೆಯಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. 1, 400 ಎಕರೆಯಲ್ಲಿ ತರಕಾರಿ, ಜೋಳ, ರಾಗಿ ಸೇರಿದಂತೆ ಇತರೆ  ಬೆಳೆಗಳನ್ನು ಬೆಳೆಯಲಾಗುತ್ತದೆ. ವಾರ್ಷಿಕವಾಗಿ 20 ಕೋಟಿಗೂ ಹೆಚ್ಚು ಅಡಿಕೆ ವಹಿವಾಟು ಮಾಡಲಾಗುತ್ತದೆ. 10 ಕೋಟಿಗೂ ಹೆಚ್ಚು ರಾಗಿ, ಜೋಳ, ತರಕಾರಿ ಸೇರಿದಂತೆ ಇತರೆ ಬೆಳೆಗಳ ವಹಿವಾಟು ನಡೆಯುತ್ತದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರದಲ್ಲಿ ಕಸ ಹಾಕೋದಕ್ಕೆ ಭೂಮಿ, ಕೆಐಡಿಬಿಗೆ ಭೂಮಿ, ಡ್ಯಾಂಗೆ ಭೂಮಿ, ಕೈಗಾರಿಕೆಗೆ ಭೂಮಿ ಸೇರಿದಂತೆ ಎಲ್ಲದಕ್ಕೂ ರೈತರ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ. ಹೀಗೆ ಪ್ರತಿಯೊಂದಕ್ಕೂ ರೈತರ ಭೂಮಿನೇ ಬೇಕು. ಹೀಗೆ ಮಾಡಿದರೆ ರೈತರ ಗತಿ ಏನಾಗಬೇಕು…? ಮುಂದುಂದು ದಿನ ಅನ್ನ ಬದಲು ಕಾಂಕ್ರೀಟ್, ಕಸ, ಮಣ್ಣು ತಿನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಎತ್ತಿನಹೊಳೆ ಡ್ಯಾಂನಲ್ಲಿ ಹರಿಯುವುದು ಬೆಂಗಳೂರಿನ ಚರಂಡಿ ನೀರು ಹೊರೆತು, ಶುದ್ಧ ನೀರಲ್ಲ. ಈ ಯೋಜನೆ ಬರೀ ಹಣ ಲಪಟಾಯಿಸಕ್ಕೆ ಮಾತ್ರ ರೂಪಿಸಲಾಗಿದೆ.‌ ರೈತರಿಗೆ, ಸಾರ್ವಜನಕರಿಗೆ ಉಪಯೋಗವಿಲ್ಲ ಎಂದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

3 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

5 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

11 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

13 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

1 day ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

1 day ago