ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.
ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಜಲಾಶಯ ನಿರ್ಮಾಣ ಮಾಡಬಾರದೆಂದು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇತರರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಗಮನ ಸೆಳೆಯಲಾಗಿದೆ.
ಈಗಾಗಲೇ ಮನವಿ ಪತ್ರ ಸರ್ಕಾರದ ಗಮನಕ್ಕೆ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಜಲಸಂಪನ್ಮೂಲ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಮಂಡಿಸಲಾಗಿದೆ.
ರಾಜ್ಯಪಾಲರ ಕಚೇರಿಂದ ಪ್ರತಿಕ್ರಿಯೆ ವ್ಯಕ್ತವಾಗಿ, ಜು.23ರ ಸಂಜೆ 4ಗಂಟೆ ಸುಮಾರಿಗೆ ರಾಜ್ಯಪಾಲರನ್ನು ರೈತರು ಭೇಟಿಯಾಗಲು ಅನುಮತಿ ನೀಡಲಾಗಿದೆ.
ನಿಗದಿಯಾಗಿರುವ ಸಮಯಕ್ಕೆ ಸರಿಯಾಗಿ ಒಂದು ಗ್ರಾಮದಿಂದ ಒಬ್ಬರಿಗೆ ರಾಜ್ಯಪಾಲರನ್ನು ಭೇಟಿಯಾಗಲು ಅನುಮತಿಯಿದೆ.
ರೈತರ ಭೇಟಿಗೆ ಸಿಎಂ ಮತ್ತು ಡಿಸಿಎಂ ಹಿಂದೇಟು ಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…