ಲಕ್ಕೇನಹಳ್ಳಿ ಬಳಿ ಎತ್ತಿಹೊಳೆ ಜಲಾಶಯ(ಡ್ಯಾಂ) ನಿರ್ಮಾಣ ವಿಚಾರ: ಡ್ಯಾಂ ನಿರ್ಮಾಣ ವಿರೋಧಿಸಿ ರಾಜ್ಯಪಾಲರಿಗೆ ರೈತರಿಂದ ಪತ್ರ: ಜು.23ರಂದು ರಾಜ್ಯಪಾಲರ ಭೇಟಿಗೆ ಅನುಮತಿ

 

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಜಲಾಶಯ ನಿರ್ಮಾಣ ಮಾಡಬಾರದೆಂದು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇತರರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಗಮನ ಸೆಳೆಯಲಾಗಿದೆ.

ಈಗಾಗಲೇ ಮನವಿ ಪತ್ರ ಸರ್ಕಾರದ ಗಮನಕ್ಕೆ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಜಲಸಂಪನ್ಮೂಲ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಮಂಡಿಸಲಾಗಿದೆ.

ರಾಜ್ಯಪಾಲರ ಕಚೇರಿಂದ ಪ್ರತಿಕ್ರಿಯೆ ವ್ಯಕ್ತವಾಗಿ, ಜು.23ರ ಸಂಜೆ 4ಗಂಟೆ ಸುಮಾರಿಗೆ ರಾಜ್ಯಪಾಲರನ್ನು ರೈತರು ಭೇಟಿಯಾಗಲು ಅನುಮತಿ ನೀಡಲಾಗಿದೆ.

ನಿಗದಿಯಾಗಿರುವ ಸಮಯಕ್ಕೆ ಸರಿಯಾಗಿ ಒಂದು ಗ್ರಾಮದಿಂದ ಒಬ್ಬರಿಗೆ ರಾಜ್ಯಪಾಲರನ್ನು ಭೇಟಿಯಾಗಲು ಅನುಮತಿಯಿದೆ.

ರೈತರ ಭೇಟಿಗೆ ಸಿಎಂ ಮತ್ತು ಡಿಸಿಎಂ ಹಿಂದೇಟು ಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ…

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

7 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

7 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

9 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago