ಲಕ್ಕೇನಹಳ್ಳಿ ಬಳಿ ಎತ್ತಿಹೊಳೆ ಜಲಾಶಯ(ಡ್ಯಾಂ) ನಿರ್ಮಾಣ ವಿಚಾರ: ಡ್ಯಾಂ ನಿರ್ಮಾಣ ವಿರೋಧಿಸಿ ರಾಜ್ಯಪಾಲರಿಗೆ ರೈತರಿಂದ ಪತ್ರ: ಜು.23ರಂದು ರಾಜ್ಯಪಾಲರ ಭೇಟಿಗೆ ಅನುಮತಿ

 

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಜಲಾಶಯ ನಿರ್ಮಾಣ ಮಾಡಬಾರದೆಂದು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇತರರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಗಮನ ಸೆಳೆಯಲಾಗಿದೆ.

ಈಗಾಗಲೇ ಮನವಿ ಪತ್ರ ಸರ್ಕಾರದ ಗಮನಕ್ಕೆ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಜಲಸಂಪನ್ಮೂಲ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಮಂಡಿಸಲಾಗಿದೆ.

ರಾಜ್ಯಪಾಲರ ಕಚೇರಿಂದ ಪ್ರತಿಕ್ರಿಯೆ ವ್ಯಕ್ತವಾಗಿ, ಜು.23ರ ಸಂಜೆ 4ಗಂಟೆ ಸುಮಾರಿಗೆ ರಾಜ್ಯಪಾಲರನ್ನು ರೈತರು ಭೇಟಿಯಾಗಲು ಅನುಮತಿ ನೀಡಲಾಗಿದೆ.

ನಿಗದಿಯಾಗಿರುವ ಸಮಯಕ್ಕೆ ಸರಿಯಾಗಿ ಒಂದು ಗ್ರಾಮದಿಂದ ಒಬ್ಬರಿಗೆ ರಾಜ್ಯಪಾಲರನ್ನು ಭೇಟಿಯಾಗಲು ಅನುಮತಿಯಿದೆ.

ರೈತರ ಭೇಟಿಗೆ ಸಿಎಂ ಮತ್ತು ಡಿಸಿಎಂ ಹಿಂದೇಟು ಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ…

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

51 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago