ಲಕ್ಕೇನಹಳ್ಳಿ ಬಳಿ ಎತ್ತಿಹೊಳೆ ಜಲಾಶಯ(ಡ್ಯಾಂ) ನಿರ್ಮಾಣ ವಿಚಾರ: ಡ್ಯಾಂ ನಿರ್ಮಾಣ ವಿರೋಧಿಸಿ ರಾಜ್ಯಪಾಲರಿಗೆ ರೈತರಿಂದ ಪತ್ರ: ಜು.23ರಂದು ರಾಜ್ಯಪಾಲರ ಭೇಟಿಗೆ ಅನುಮತಿ

 

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು 7 ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಜಲಾಶಯ ನಿರ್ಮಾಣ ಮಾಡಬಾರದೆಂದು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇತರರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಗಮನ ಸೆಳೆಯಲಾಗಿದೆ.

ಈಗಾಗಲೇ ಮನವಿ ಪತ್ರ ಸರ್ಕಾರದ ಗಮನಕ್ಕೆ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಜಲಸಂಪನ್ಮೂಲ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಮಂಡಿಸಲಾಗಿದೆ.

ರಾಜ್ಯಪಾಲರ ಕಚೇರಿಂದ ಪ್ರತಿಕ್ರಿಯೆ ವ್ಯಕ್ತವಾಗಿ, ಜು.23ರ ಸಂಜೆ 4ಗಂಟೆ ಸುಮಾರಿಗೆ ರಾಜ್ಯಪಾಲರನ್ನು ರೈತರು ಭೇಟಿಯಾಗಲು ಅನುಮತಿ ನೀಡಲಾಗಿದೆ.

ನಿಗದಿಯಾಗಿರುವ ಸಮಯಕ್ಕೆ ಸರಿಯಾಗಿ ಒಂದು ಗ್ರಾಮದಿಂದ ಒಬ್ಬರಿಗೆ ರಾಜ್ಯಪಾಲರನ್ನು ಭೇಟಿಯಾಗಲು ಅನುಮತಿಯಿದೆ.

ರೈತರ ಭೇಟಿಗೆ ಸಿಎಂ ಮತ್ತು ಡಿಸಿಎಂ ಹಿಂದೇಟು ಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ…

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago