ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.
ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…