ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.
ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…