Categories: ಐಪಿಎಲ್

ಲಕ್ನೋ ವಿರುದ್ಧ ಸೂಪರ್ ಕಿಂಗ್ಸ್ ಜಯಭೇರಿ

ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.

ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.

ಗುರಿ ಬೆನ್ನಟ್ಟಿದ ಸೂಪರ್ ಜೆಂಟ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮೇಯರ್ಸ (53) ಹಾಗೂ ನಾಯಕ ಕೆ. ಎಲ್. ರಾಹುಲ್ (20) ರನ್ ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿ ಆತ್ಮ ವಿಶ್ವಾಸ ಮೂಡಿಸಿದ್ದರು, ಚಾಣಾಕ್ಷತೆಯನ್ನು ತೋರಿಸಿ ಸ್ಪಿನ್ನರ್ ಮೊಯಿನ್ ಆಲಿ ಅವರಿಗೆ ಬಾಲ್ ನೀಡಿದ ನಾಯಕ ಮಹೇಂದ್ರ ಸಿಂಗ್ ದೋನಿ ಜೊತೆಯಾಟ ಮುರಿಯುವಲ್ಲಿ ಯಶಸ್ವಿಯಾದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಲ್ ರೌಂಡರ್ ಮೋಯಿನ್ ಆಲಿಗೆ 4 ವಿಕೆಟ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ತುಷಾರ್ ದೇಶಪಾಂಡೆ 2 ವಿಕೆಟ್ ಕಬಳಿಸಿದರು, ಐಪಿಎಲ್ ನಲ್ಲಿ 5000 ರನ್ ಗಳಿಸಿ ಮಹೇಂದ್ರ ಸಿಂಗ್ ದೋನಿ ವಿಶೇಷ ದಾಖಲೆ ಸೃಷ್ಟಿಸಿದರು. ಆಲ್ ರೌಂಡರ್ ಪ್ರದರ್ಶನ ನೀಡಿದ ಮೊಯಿನ್ ಆಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

9 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

10 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

16 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

17 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

22 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago