Categories: ಐಪಿಎಲ್

ಲಕ್ನೋ ವಿರುದ್ಧ ಸೂಪರ್ ಕಿಂಗ್ಸ್ ಜಯಭೇರಿ

ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.

ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.

ಗುರಿ ಬೆನ್ನಟ್ಟಿದ ಸೂಪರ್ ಜೆಂಟ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮೇಯರ್ಸ (53) ಹಾಗೂ ನಾಯಕ ಕೆ. ಎಲ್. ರಾಹುಲ್ (20) ರನ್ ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿ ಆತ್ಮ ವಿಶ್ವಾಸ ಮೂಡಿಸಿದ್ದರು, ಚಾಣಾಕ್ಷತೆಯನ್ನು ತೋರಿಸಿ ಸ್ಪಿನ್ನರ್ ಮೊಯಿನ್ ಆಲಿ ಅವರಿಗೆ ಬಾಲ್ ನೀಡಿದ ನಾಯಕ ಮಹೇಂದ್ರ ಸಿಂಗ್ ದೋನಿ ಜೊತೆಯಾಟ ಮುರಿಯುವಲ್ಲಿ ಯಶಸ್ವಿಯಾದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಲ್ ರೌಂಡರ್ ಮೋಯಿನ್ ಆಲಿಗೆ 4 ವಿಕೆಟ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ತುಷಾರ್ ದೇಶಪಾಂಡೆ 2 ವಿಕೆಟ್ ಕಬಳಿಸಿದರು, ಐಪಿಎಲ್ ನಲ್ಲಿ 5000 ರನ್ ಗಳಿಸಿ ಮಹೇಂದ್ರ ಸಿಂಗ್ ದೋನಿ ವಿಶೇಷ ದಾಖಲೆ ಸೃಷ್ಟಿಸಿದರು. ಆಲ್ ರೌಂಡರ್ ಪ್ರದರ್ಶನ ನೀಡಿದ ಮೊಯಿನ್ ಆಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

3 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

11 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago