Categories: ಐಪಿಎಲ್

ಲಕ್ನೋ ವಿರುದ್ಧ ಸೂಪರ್ ಕಿಂಗ್ಸ್ ಜಯಭೇರಿ

ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.

ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.

ಗುರಿ ಬೆನ್ನಟ್ಟಿದ ಸೂಪರ್ ಜೆಂಟ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮೇಯರ್ಸ (53) ಹಾಗೂ ನಾಯಕ ಕೆ. ಎಲ್. ರಾಹುಲ್ (20) ರನ್ ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿ ಆತ್ಮ ವಿಶ್ವಾಸ ಮೂಡಿಸಿದ್ದರು, ಚಾಣಾಕ್ಷತೆಯನ್ನು ತೋರಿಸಿ ಸ್ಪಿನ್ನರ್ ಮೊಯಿನ್ ಆಲಿ ಅವರಿಗೆ ಬಾಲ್ ನೀಡಿದ ನಾಯಕ ಮಹೇಂದ್ರ ಸಿಂಗ್ ದೋನಿ ಜೊತೆಯಾಟ ಮುರಿಯುವಲ್ಲಿ ಯಶಸ್ವಿಯಾದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಲ್ ರೌಂಡರ್ ಮೋಯಿನ್ ಆಲಿಗೆ 4 ವಿಕೆಟ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ತುಷಾರ್ ದೇಶಪಾಂಡೆ 2 ವಿಕೆಟ್ ಕಬಳಿಸಿದರು, ಐಪಿಎಲ್ ನಲ್ಲಿ 5000 ರನ್ ಗಳಿಸಿ ಮಹೇಂದ್ರ ಸಿಂಗ್ ದೋನಿ ವಿಶೇಷ ದಾಖಲೆ ಸೃಷ್ಟಿಸಿದರು. ಆಲ್ ರೌಂಡರ್ ಪ್ರದರ್ಶನ ನೀಡಿದ ಮೊಯಿನ್ ಆಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

27 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago