Categories: ಐಪಿಎಲ್

ಲಕ್ನೋ ವಿರುದ್ಧ ಸೂಪರ್ ಕಿಂಗ್ಸ್ ಜಯಭೇರಿ

ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.

ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.

ಗುರಿ ಬೆನ್ನಟ್ಟಿದ ಸೂಪರ್ ಜೆಂಟ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮೇಯರ್ಸ (53) ಹಾಗೂ ನಾಯಕ ಕೆ. ಎಲ್. ರಾಹುಲ್ (20) ರನ್ ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿ ಆತ್ಮ ವಿಶ್ವಾಸ ಮೂಡಿಸಿದ್ದರು, ಚಾಣಾಕ್ಷತೆಯನ್ನು ತೋರಿಸಿ ಸ್ಪಿನ್ನರ್ ಮೊಯಿನ್ ಆಲಿ ಅವರಿಗೆ ಬಾಲ್ ನೀಡಿದ ನಾಯಕ ಮಹೇಂದ್ರ ಸಿಂಗ್ ದೋನಿ ಜೊತೆಯಾಟ ಮುರಿಯುವಲ್ಲಿ ಯಶಸ್ವಿಯಾದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಲ್ ರೌಂಡರ್ ಮೋಯಿನ್ ಆಲಿಗೆ 4 ವಿಕೆಟ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ತುಷಾರ್ ದೇಶಪಾಂಡೆ 2 ವಿಕೆಟ್ ಕಬಳಿಸಿದರು, ಐಪಿಎಲ್ ನಲ್ಲಿ 5000 ರನ್ ಗಳಿಸಿ ಮಹೇಂದ್ರ ಸಿಂಗ್ ದೋನಿ ವಿಶೇಷ ದಾಖಲೆ ಸೃಷ್ಟಿಸಿದರು. ಆಲ್ ರೌಂಡರ್ ಪ್ರದರ್ಶನ ನೀಡಿದ ಮೊಯಿನ್ ಆಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

11 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

11 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

12 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

13 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

16 hours ago