ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.
ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…