ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.
ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…