Categories: ಐಪಿಎಲ್

ಲಕ್ನೋ ವಿರುದ್ಧ ಸೂಪರ್ ಕಿಂಗ್ಸ್ ಜಯಭೇರಿ

ಚೆನ್ನೈ : ನಾಲ್ಕು ವರ್ಷಗಳ ನಂತರ ತವರಿನಂಗಳದಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಗಳು ರನ್ ಹೊಳೆ ಹರಿಸಿದರು, ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 12 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಆರಂಭವನ್ನು ಪಡೆಯಿತು, ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಜೊತೆಯಾಟದಿಂದಾಗಿ ಮೊದಲ ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಶಿವಂ ದುಬೆ (27), ಮೊಯಿನ್ ಆಲಿ (19), ಅಂಬಾಟಿ ರಾಯಡು (27) ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ (12) ತಂಡಕ್ಕೆ ಉಪಯುಕ್ತ ಕೊಡುಗೆ ನೀಡುವುದರೊಂದಿಗೆ ತಂಡದ ಮೊತ್ತ 217 ರನ್ ಗಳಿಸಿದರು.

ಲಕ್ನೊ ಸೂಪರ್ ಜೆಂಟ್ಸ್ ಪರವಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ ಉಳಿದ ಬೌಲರ್ ಗಳು ದುಬಾರಿಯಾದರು.

ಗುರಿ ಬೆನ್ನಟ್ಟಿದ ಸೂಪರ್ ಜೆಂಟ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮೇಯರ್ಸ (53) ಹಾಗೂ ನಾಯಕ ಕೆ. ಎಲ್. ರಾಹುಲ್ (20) ರನ್ ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿ ಆತ್ಮ ವಿಶ್ವಾಸ ಮೂಡಿಸಿದ್ದರು, ಚಾಣಾಕ್ಷತೆಯನ್ನು ತೋರಿಸಿ ಸ್ಪಿನ್ನರ್ ಮೊಯಿನ್ ಆಲಿ ಅವರಿಗೆ ಬಾಲ್ ನೀಡಿದ ನಾಯಕ ಮಹೇಂದ್ರ ಸಿಂಗ್ ದೋನಿ ಜೊತೆಯಾಟ ಮುರಿಯುವಲ್ಲಿ ಯಶಸ್ವಿಯಾದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ದೀಪಕ್ ಹೂಡ (2) ಹಾಗೂ ಕೃನಲ್ ಪಾಂಡ್ಯ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಮಾರ್ಕ್ ಸ್ಟೋನಿಸ್ (21), ನಿಕೋಲಸ್ ಪೂರನ್ (32), ಆಯುಷ್ ಬಧೋನಿ(23) ಹಾಗೂ ಕೆ. ಗೌತಮ್ (17) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಲ್ ರೌಂಡರ್ ಮೋಯಿನ್ ಆಲಿಗೆ 4 ವಿಕೆಟ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ತುಷಾರ್ ದೇಶಪಾಂಡೆ 2 ವಿಕೆಟ್ ಕಬಳಿಸಿದರು, ಐಪಿಎಲ್ ನಲ್ಲಿ 5000 ರನ್ ಗಳಿಸಿ ಮಹೇಂದ್ರ ಸಿಂಗ್ ದೋನಿ ವಿಶೇಷ ದಾಖಲೆ ಸೃಷ್ಟಿಸಿದರು. ಆಲ್ ರೌಂಡರ್ ಪ್ರದರ್ಶನ ನೀಡಿದ ಮೊಯಿನ್ ಆಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago