ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂದು ಪಿಎಂಸಿಸಿ ಬಿ.ಎಸ್. ರಾಜಶೇಖರಯ್ಯ ಹೇಳಿದರು.
ತಾಲೂಕಿನ ಕೊನಘಟ್ಟ ಗ್ರಾಮದ ಮಹಾಲಕ್ಷ್ಮಿ ಫ್ಯೂಯೆಲ್ ಸ್ಟೇಷನ್ ಸಮೀಪ ನಡೆದ ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಆಯ್ಕೆ ಸಮಾರಂಭದಲ್ಲಿ ಅವರು ಮಾತನಾಡಿ, ಜನರ ಸೇವೆಗೆ ಸದಾ ಸನ್ನದ್ಧರಾಗಿರಬೇಕು. ಲಯನ್ಸ್ ಕ್ಲಬ್ನಂತಹ ಸಂಘಟನೆಗಳ ಮೂಲಕ ಸೇವೆ ಸಲ್ಲಿಸುವುದು ಸಮಾಜಕ್ಕೆ ಮಾದರಿಯಾಗಲಿದೆ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷ ಜಿ. ಲಕ್ಷ್ಮಿಪತಿ ಮಾತನಾಡಿ, ಕ್ಲಬ್ ವತಿಯಿಂದ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು.
ಕೊನಘಟ್ಟ ಲಯನ್ಸ್ ಕ್ಲಬ್ ಸ್ಥಾಪನೆಯಾಗಿ ಒಂದು ವರ್ಷ ಪೂರ್ಣಗೊಂಡು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಿಂದಿನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನೇ ಮರುನೇಮಕ ಮಾಡಲಾಗಿದೆ. ಕ್ಲಬ್ನಲ್ಲಿ ಉತ್ತಮ ತಂಡವಿದ್ದು, ಲಯನ್ಸ್ ಕ್ಲಬ್ನ ಧ್ಯೇಯೋದ್ದೇಶಗಳಿಗೆ ಅನುಗುಣವಾಗಿ ಇನ್ನಷ್ಟು ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ 2,000 ಮಕ್ಕಳಿಗೆ ಭಾರತ ಸೇವಾದಳದ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸುವ ಯೋಜನೆ ರೂಪಿಸಲಾಗಿದ್ದು, ಅದರ ಅಂಗವಾಗಿ ಬಡ ಕುಟುಂಬಗಳಿಗೆ ಸಾಂಕೇತಿಕವಾಗಿ ಹೊದಿಕೆಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಬ್ನ ಜಿಲ್ಲಾ ಆಡಳಿತಗಾರ ಎಂ.ಆರ್. ಶ್ರೀನಿವಾಸ್, ಆರ್. ರವಿಚಂದ್ರನ್, ಜೆ.ಆರ್. ರಾಕೇಶ್, ಡಾ. ಎಂ. ಶ್ರೀನಿವಾಸ್ ರೆಡ್ಡಿ, ಕೆ.ಆರ್. ರವಿಕಿರಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಶುಭ ಹಾರೈಸಲಾಯಿತು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…