ಲಲಿತಕಲೆಗಳಿಂದ ಮುನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳಿಂದ ಮುನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ ಎಂದು ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್  ಮತ್ತು ಗೈಡ್ ಸಹಯೋಗದಲ್ಲಿ ಜಾನಪದ ಗೀತಾ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರುಗಳಾದ ಎಂ.ಕವಿತಾ, ಟಿ.ಸಿ.ಹರ್ಷಿತಾ, ಕೆ.ಯು.ಹರ್ಷಿತಾ, ಬಿ.ಎಂ.ವರ್ಷಿಣಿ, ವಿ.ನಾಗವೇಣಿ, ಎನ್.ಕಾವ್ಯಶ್ರೀ ಅವರನ್ನು ಅಭಿನಂದಿಸಿ ಮಾತನಾಡಿದರು.

ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವ ಬಿಟ್ಟು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಧೈರ್ಯ ತೋರಬೇಕು. ಪ್ರತಿಭೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು ಮಾತನಾಡಿ,   ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಯ್ಕೆಯಾಗಿರುವ ಗೊ.ರು.ಚನ್ನಬಸಪ್ಪ ಅವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾಗಿ ಆಗಿ ಮಹತ್ವದ ಸೇವೆ ಸಲ್ಲಿಸಿದವರು ಎಂದರು.

ಗೊ.ರು.ಚನ್ನಬಸಪ್ಪ ಅವರು  ಭಾರತ್ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಹಲವಾರು ನೃತ್ಯ ಗೀತೆಗಳನ್ನು ರಚಿಸಿದ್ದಾರೆ. ಜಾನಪದ ವಿದ್ವಾಂಸರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗಣನೀಯ ಸೇವೆಯನ್ನು ಗೊ.ರು.ಚನ್ನಬಸಪ್ಪ ಸಲ್ಲಿಸಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ಮಾತನಾಡಿ,  ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ.  ಜಾನಪದ ಸಾಹಿತ್ಯದಲ್ಲಿ ಬದುಕಿನ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಾಣಬಹುದಾಗಿದೆ. ಜಾನಪದ ಎಂಬುದು ಸಾಂಸ್ಕೃತಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ‌ ದರ್ಜೆ ಕಾಲೇಜಿನ ಪ್ರಾಧ್ಯಾಪಕರುಗಳಾದ ಪ್ರೊ.ನಂಜಪ್ಪ, ಪ್ರೊ.ಸುಷ್ಮಾ, ಪ್ರೊ.ಭಾರತಿ, ಪ್ರೊ.ದಿವ್ಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

60 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago