ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಕವನಾ (20) ತಂದೆಯಿಂದಲೇ ಹತ್ಯೆಯಾದ ಮೃತ ದುರ್ದೈವಿ. ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಮನನೊಂದಿದ್ದ ತಂದೆ.
ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.
ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿದ ತಂದೆ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…