ಲವ್ವಲ್ಲಿ ಬಿದ್ದ ಇಬ್ಬರು ಹೆಣ್ಣು ಮಕ್ಕಳು: ಮಾರ್ಯಾದೆಗೆ ಅಂಜಿ ಒಬ್ಬ ಮಗಳ ಕತ್ತು ಕೊಯ್ದ ತಂದೆ

ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಕವನಾ (20) ತಂದೆಯಿಂದಲೇ ಹತ್ಯೆಯಾದ ಮೃತ‌ ದುರ್ದೈವಿ. ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು‌ ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ‌ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಮನನೊಂದಿದ್ದ ತಂದೆ.

ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.

ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು‌ ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿದ ತಂದೆ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago