ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಕವನಾ (20) ತಂದೆಯಿಂದಲೇ ಹತ್ಯೆಯಾದ ಮೃತ ದುರ್ದೈವಿ. ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಮನನೊಂದಿದ್ದ ತಂದೆ.
ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.
ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿದ ತಂದೆ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…