ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಕವನಾ (20) ತಂದೆಯಿಂದಲೇ ಹತ್ಯೆಯಾದ ಮೃತ ದುರ್ದೈವಿ. ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಮನನೊಂದಿದ್ದ ತಂದೆ.
ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.
ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿದ ತಂದೆ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ.
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…