ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಕವನಾ (20) ತಂದೆಯಿಂದಲೇ ಹತ್ಯೆಯಾದ ಮೃತ ದುರ್ದೈವಿ. ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಮನನೊಂದಿದ್ದ ತಂದೆ.
ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.
ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿದ ತಂದೆ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ.
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…