ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ ಹಾಗೂ ಲಾನಿನೊ ಕಾರಣ
ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ
ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…