ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ ಹಾಗೂ ಲಾನಿನೊ ಕಾರಣ
ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ
ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…