ಲಾನಿನೊ ಎಫೆಕ್ಟ್: ವಾಡಿಕೆಗಿಂತ ಕಡಿಮೆ ಮಳೆ- ವಾಡಿಕೆಗಿಂತ ಹೆಚ್ಚು ಬಿಸಿಲು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ತಟ್ಟುವ ಲಾನಿನೊ ಬಿಸಿ

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.

ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ‌ ಹಾಗೂ ಲಾನಿನೊ ಕಾರಣ

ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ‌ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.

ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ

ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ‌ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ‌ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.

ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ

ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.

ಮಳೆ ನೀರನ್ನು ಪೋಲಾಗದಂತೆ ತಡೆದು ಹಲವು ವಿಧಗಳಲ್ಲಿ ಶೇಖರಿಸಿಕೊಂಡು ವಾಡಿಕೆಗಿಂತ ಕಡಿಮೆ ಮಳೆಯಾದ ಸಂದರ್ಭದಲ್ಲಿ ನೀರನ್ನು ಮರು ಬಳಕೆ ಮಾಡಿಕೊಳ್ಳಬಹುದು ಇದರಿಂದ ಬರಗಾಲವನ್ನು ಎದುರಿಸಲು ಅನುಕೂಲವಾಗಲಿದೆ ಎಂದರು.

ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ‌ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 hour ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago