ಲಾನಿನೊ ಎಫೆಕ್ಟ್: ವಾಡಿಕೆಗಿಂತ ಕಡಿಮೆ ಮಳೆ- ವಾಡಿಕೆಗಿಂತ ಹೆಚ್ಚು ಬಿಸಿಲು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ತಟ್ಟುವ ಲಾನಿನೊ ಬಿಸಿ

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.

ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ‌ ಹಾಗೂ ಲಾನಿನೊ ಕಾರಣ

ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ‌ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.

ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ

ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ‌ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ‌ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.

ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ

ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.

ಮಳೆ ನೀರನ್ನು ಪೋಲಾಗದಂತೆ ತಡೆದು ಹಲವು ವಿಧಗಳಲ್ಲಿ ಶೇಖರಿಸಿಕೊಂಡು ವಾಡಿಕೆಗಿಂತ ಕಡಿಮೆ ಮಳೆಯಾದ ಸಂದರ್ಭದಲ್ಲಿ ನೀರನ್ನು ಮರು ಬಳಕೆ ಮಾಡಿಕೊಳ್ಳಬಹುದು ಇದರಿಂದ ಬರಗಾಲವನ್ನು ಎದುರಿಸಲು ಅನುಕೂಲವಾಗಲಿದೆ ಎಂದರು.

ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ‌ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

1 hour ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago