ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ ಹಾಗೂ ಲಾನಿನೊ ಕಾರಣ
ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ
ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…