ಲಾನಿನೊ ಎಫೆಕ್ಟ್: ವಾಡಿಕೆಗಿಂತ ಕಡಿಮೆ ಮಳೆ- ವಾಡಿಕೆಗಿಂತ ಹೆಚ್ಚು ಬಿಸಿಲು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ತಟ್ಟುವ ಲಾನಿನೊ ಬಿಸಿ

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.

ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ‌ ಹಾಗೂ ಲಾನಿನೊ ಕಾರಣ

ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ‌ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.

ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ

ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ‌ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ‌ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.

ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ

ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.

ಮಳೆ ನೀರನ್ನು ಪೋಲಾಗದಂತೆ ತಡೆದು ಹಲವು ವಿಧಗಳಲ್ಲಿ ಶೇಖರಿಸಿಕೊಂಡು ವಾಡಿಕೆಗಿಂತ ಕಡಿಮೆ ಮಳೆಯಾದ ಸಂದರ್ಭದಲ್ಲಿ ನೀರನ್ನು ಮರು ಬಳಕೆ ಮಾಡಿಕೊಳ್ಳಬಹುದು ಇದರಿಂದ ಬರಗಾಲವನ್ನು ಎದುರಿಸಲು ಅನುಕೂಲವಾಗಲಿದೆ ಎಂದರು.

ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ‌ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.

Ramesh Babu

Journalist

Recent Posts

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

2 minutes ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 hour ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

3 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

4 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

5 hours ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

15 hours ago