ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ ಹಾಗೂ ಲಾನಿನೊ ಕಾರಣ
ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ
ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…