ಭಾರತೀಯ ಹವಮಾನ ಇಲಾಖೆಯ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಮಳೆ ಒಂದು ವಾರ ತಡವಾಗಿ ಆಗಮಿಸಿದೆ, ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಹೆಚ್ಚು ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ, ಮತ್ತು ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ಜೂನ್ ಮತ್ತು ಜುಲೈ ತಿಂಗಳ ಆರಂಭದಲ್ಲಿ ಬೀಳುವ ಮಳೆಯನ್ನು ಪೋಲಾಗದಂತೆ ತಡೆದು ಹಲವು ವಿಧಗಳಲ್ಲಿ ಶೇಖರಿಸಿಕೊಂಡು ವಾಡಿಕೆಗಿಂತ ಕಡಿಮೆ ಮಳೆಯಾದ ಸಂದರ್ಭದಲ್ಲಿ ನೀರನ್ನು ಮರು ಬಳಕೆ ಮಾಡಿಕೊಳ್ಳಬಹುದು ಇದರಿಂದ ಬರಗಾಲವನ್ನು ಎದುರಿಸಲು ಅನುಕೂಲವಾಗಲಿದೆ ಎಂದರು.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿಗೆ ಸಂಬಂಧಿಸಿದ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…